ಮನರಂಜನೆ

ಬಿ ಪ್ಲಸ್, ಸಿ ಪ್ಲಸ್‍ ಪಡೆಯುತ್ತಿದ್ದ ‘ದುನಿಯಾ’ ವಿಜಯ್‍ಗೆ ‘ಎ’ ಸಿಕ್ಕಿತು

‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಸೆನ್ಸಾರ್‍ ಸಹ ಮುಗಿದು, ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದೆ.

ಅಂದಹಾಗೆ, ಈ ಚಿತ್ರಕ್ಕೆ ಸೆನ್ಸಾರ್‍ ಮಂಡಳಿಯವರು ‘ಎ’ ಪ್ರಮಾಣಪತ್ರ ನೀಡಿದ್ದಾರೆ. ವಿಜಯ್‍ ಅಭಿನಯದ ‘ಸಲಗ’ ಚಿತ್ರಕ್ಕೂ ‘ಎ’ ಸರ್ಟಿಫಿಕೇಟ್‍ ಸಿಕ್ಕಿತ್ತು. ಅದಕ್ಕೆ ಸರಿಯಾಗಿ ಚಿತ್ರದಲ್ಲಿ ಸಾಕಷ್ಟು ಹಿಂಸೆ, ಕ್ರೌರ್ಯ ಮತ್ತು ರಕ್ತಪಾತವಿತ್ತು. ‘ಭೀಮ’ ಸಹ ಅದೇ ಜಾನರ್‍ನ ಚಿತ್ರವಾದ್ದರಿಂದ ಈ ಚಿತ್ರಕ್ಕೂ ‘ಎ’ ಸಿಗಬಹುದು ಎಂದು ಹಲವರು ಅಂದಾಜಿಸಿದ್ದರು. ಅದೀಗ ನಿಜವಾಗಿದೆ.

ಈ ಕುರಿತು ಮಾತನಾಡುವ ‘ದುನಿಯಾ’ ವಿಜಯ್‍, ‘ಈ ಚಿತ್ರದ ಮೂಲಕ ಒಂದು ಸೂಕ್ಷ್ಮ ವಿಚಾರವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸಾಮಾಜಿಕ ಸಂದೇಶವಿರುವ ಈ ಚಿತ್ರ ಎಲ್ಲರಲ್ಲೂ ಜಾಗೃತಿ ಮೂಡಿಸುವಂತೆ ಆಗಬೇಕು. ನಾನು ಹಾಗೂ ಸಂಭಾಷಣೆ ಕಾರ ಮಾಸ್ತಿ ಸೇರಿ ಕಥೆ ಹಂತದಿಂದ ಹಿಡಿದು ಚಿತ್ರಕಥೆ, ಸಂಭಾಷಣೆಯಿಂದ ಪ್ರತಿ ಹಂತದಲ್ಲೂ ಬಹಳ ಶ್ರಮ ಪಟ್ಟು ಕೆಲಸ ಮಾಡಿದ್ದೇವೆ. ಶಾಲಾ ದಿನಗಳಿಂದಲೂ ಬಿ ಪ್ಲಸ್, ಸಿ ಪ್ಲಸ್ ಅಂಕಗಳನ್ನು ಪಡೆಯುತ್ತಿದೆ. ಈಗ ‘ಭೀಮ’ ಚಿತ್ರದಲ್ಲಿ ‘ಎ’ ಸಿಕ್ಕಿದೆ. ಚಿತ್ರದ ಸಂಭಾಷಣೆ ವಿಚಾರವಾಗಿ ಒಂದಷ್ಟು ಕಟ್ಸ್ , ಮ್ಯೂಟ್ಸ್ ಮಾಡಲು ಸೆನ್ಸಾರ್‍ನವರು ಹೇಳಿದ್ದಾರೆ. ಅದರಂತೆ ಎಲ್ಲವನ್ನೂ ಮಾಡುತ್ತೇವೆ’ ಎಂದರು.

ಈ ಚಿತ್ರಕ್ಕಾಗಿ ವಿಜಯ್‍ ಹೆಚ್ಚಾಗಿ ಬೆಂಗಳೂರಿನ ಸ್ಲಂಗಳಲ್ಲಿ ಚಿತ್ರೀಕರಣ ಮಾಡಿದ್ದಾರೆ. ‘ನನಗೆ ಸಹಜತೆ ಬೇಕಿತ್ತು. ಹಾಗಾಗಿ, ಹಾಡು ಮತ್ತು ಕೆಲವು ದೃಶ್ಯಗಳ ಚಿತ್ರೀಕರಣ ಬಿಟ್ಟರೆ, ಮಿಕ್ಕಂತೆ ಎಲ್ಲವನ್ನೂ ನಾವು ನೈಜ ಪರಿಸರದಲ್ಲೇ ಮಾಡಿದ್ದೇವೆ. ಸಾಕಷ್ಟು ಸ್ಲಂ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಚಿತ್ರದಲ್ಲಿ 70ಕ್ಕೂ ಹೆಚ್ಚು ಜನ ಹೊಸಬರು ನಟಿಸಿದ್ದಾರೆ. ರಾತ್ರಿ ಹೊತ್ತು ಚಿತ್ರೀಕರಣ ಜಾಸ್ತಿ ಇದೆ. 125 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಕೆಲವು ಕಡೆ ಹೊಸಬರನ್ನಿಟ್ಟುಕೊಂಡು ಚಿತ್ರೀಕರಣ ಮಾಡುವುದು ನಿಜಕ್ಕೂ ಕಷ್ಟದ ಕೆಲಸವಾಗಿತ್ತು. ಈ ಚಿತ್ರದಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ’ ಎಂದರು.

‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜೊತೆಯಾಗಿ ನಿರ್ಮಿಸಿದ್ದು, ಚಿತ್ರಕ್ಕೆ ಚರಣ್ರಾಜ್ ಸಂಗೀತ ಮತ್ತು ಶಿವಸೇನಾ ಛಾಯಾಗ್ರಹಣವಿದೆ. ವಿಜಯ್‍ಗೆ ನಾಯಕಿಯಾಗಿ ಅಶ್ವಿನಿ ನಟಿಸಿದ್ದಾರೆ. ಮಿಕ್ಕಂತೆ ರಂಗಾಯಣ ರಘು, ಅಚ್ಯುತ್‍ ಕುಮಾರ್‍, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

14 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

29 mins ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

42 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

45 mins ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

50 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

57 mins ago