‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಸೆನ್ಸಾರ್ ಸಹ ಮುಗಿದು, ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದೆ.
ಅಂದಹಾಗೆ, ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯವರು ‘ಎ’ ಪ್ರಮಾಣಪತ್ರ ನೀಡಿದ್ದಾರೆ. ವಿಜಯ್ ಅಭಿನಯದ ‘ಸಲಗ’ ಚಿತ್ರಕ್ಕೂ ‘ಎ’ ಸರ್ಟಿಫಿಕೇಟ್ ಸಿಕ್ಕಿತ್ತು. ಅದಕ್ಕೆ ಸರಿಯಾಗಿ ಚಿತ್ರದಲ್ಲಿ ಸಾಕಷ್ಟು ಹಿಂಸೆ, ಕ್ರೌರ್ಯ ಮತ್ತು ರಕ್ತಪಾತವಿತ್ತು. ‘ಭೀಮ’ ಸಹ ಅದೇ ಜಾನರ್ನ ಚಿತ್ರವಾದ್ದರಿಂದ ಈ ಚಿತ್ರಕ್ಕೂ ‘ಎ’ ಸಿಗಬಹುದು ಎಂದು ಹಲವರು ಅಂದಾಜಿಸಿದ್ದರು. ಅದೀಗ ನಿಜವಾಗಿದೆ.
ಈ ಕುರಿತು ಮಾತನಾಡುವ ‘ದುನಿಯಾ’ ವಿಜಯ್, ‘ಈ ಚಿತ್ರದ ಮೂಲಕ ಒಂದು ಸೂಕ್ಷ್ಮ ವಿಚಾರವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸಾಮಾಜಿಕ ಸಂದೇಶವಿರುವ ಈ ಚಿತ್ರ ಎಲ್ಲರಲ್ಲೂ ಜಾಗೃತಿ ಮೂಡಿಸುವಂತೆ ಆಗಬೇಕು. ನಾನು ಹಾಗೂ ಸಂಭಾಷಣೆ ಕಾರ ಮಾಸ್ತಿ ಸೇರಿ ಕಥೆ ಹಂತದಿಂದ ಹಿಡಿದು ಚಿತ್ರಕಥೆ, ಸಂಭಾಷಣೆಯಿಂದ ಪ್ರತಿ ಹಂತದಲ್ಲೂ ಬಹಳ ಶ್ರಮ ಪಟ್ಟು ಕೆಲಸ ಮಾಡಿದ್ದೇವೆ. ಶಾಲಾ ದಿನಗಳಿಂದಲೂ ಬಿ ಪ್ಲಸ್, ಸಿ ಪ್ಲಸ್ ಅಂಕಗಳನ್ನು ಪಡೆಯುತ್ತಿದೆ. ಈಗ ‘ಭೀಮ’ ಚಿತ್ರದಲ್ಲಿ ‘ಎ’ ಸಿಕ್ಕಿದೆ. ಚಿತ್ರದ ಸಂಭಾಷಣೆ ವಿಚಾರವಾಗಿ ಒಂದಷ್ಟು ಕಟ್ಸ್ , ಮ್ಯೂಟ್ಸ್ ಮಾಡಲು ಸೆನ್ಸಾರ್ನವರು ಹೇಳಿದ್ದಾರೆ. ಅದರಂತೆ ಎಲ್ಲವನ್ನೂ ಮಾಡುತ್ತೇವೆ’ ಎಂದರು.
ಈ ಚಿತ್ರಕ್ಕಾಗಿ ವಿಜಯ್ ಹೆಚ್ಚಾಗಿ ಬೆಂಗಳೂರಿನ ಸ್ಲಂಗಳಲ್ಲಿ ಚಿತ್ರೀಕರಣ ಮಾಡಿದ್ದಾರೆ. ‘ನನಗೆ ಸಹಜತೆ ಬೇಕಿತ್ತು. ಹಾಗಾಗಿ, ಹಾಡು ಮತ್ತು ಕೆಲವು ದೃಶ್ಯಗಳ ಚಿತ್ರೀಕರಣ ಬಿಟ್ಟರೆ, ಮಿಕ್ಕಂತೆ ಎಲ್ಲವನ್ನೂ ನಾವು ನೈಜ ಪರಿಸರದಲ್ಲೇ ಮಾಡಿದ್ದೇವೆ. ಸಾಕಷ್ಟು ಸ್ಲಂ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಚಿತ್ರದಲ್ಲಿ 70ಕ್ಕೂ ಹೆಚ್ಚು ಜನ ಹೊಸಬರು ನಟಿಸಿದ್ದಾರೆ. ರಾತ್ರಿ ಹೊತ್ತು ಚಿತ್ರೀಕರಣ ಜಾಸ್ತಿ ಇದೆ. 125 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಕೆಲವು ಕಡೆ ಹೊಸಬರನ್ನಿಟ್ಟುಕೊಂಡು ಚಿತ್ರೀಕರಣ ಮಾಡುವುದು ನಿಜಕ್ಕೂ ಕಷ್ಟದ ಕೆಲಸವಾಗಿತ್ತು. ಈ ಚಿತ್ರದಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ’ ಎಂದರು.
‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜೊತೆಯಾಗಿ ನಿರ್ಮಿಸಿದ್ದು, ಚಿತ್ರಕ್ಕೆ ಚರಣ್ರಾಜ್ ಸಂಗೀತ ಮತ್ತು ಶಿವಸೇನಾ ಛಾಯಾಗ್ರಹಣವಿದೆ. ವಿಜಯ್ಗೆ ನಾಯಕಿಯಾಗಿ ಅಶ್ವಿನಿ ನಟಿಸಿದ್ದಾರೆ. ಮಿಕ್ಕಂತೆ ರಂಗಾಯಣ ರಘು, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…