‘ದುನಿಯಾ’ ವಿಜಯ್ ಅಭಿನಯದಲ್ಲಿ ಎಸ್. ನಾರಾಯಣ್ ಇದಕ್ಕೂ ಮೊದಲು ‘ಚಂಡ’ ಹಾಗೂ ‘ದಕ್ಷ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಈಗ ಮೂರನೆಯ ಚಿತ್ರವಾಗಿ, ‘ಮಾರುತ’ ಮೂಡಿಬಂದಿದೆ. ಈ ಚಿತ್ರದಲ್ಲಿ ವಿಜಯ್ ಜೊತೆಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್ ಮಂಜು ಸಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಈ ಚಿತ್ರವನ್ನು ಕೆ. ಮಂಜು ಹಾಗೂ ರಮೇಶ್ ಯಾದವ್ ಜೊತೆಯಾಗಿ ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಹಿಂದೆ ‘ದುನಿಯಾ’ ವಿಜಯ್ ನಟನೆಯ ‘ರಜನಿಕಾಂತ’ ಹಾಗೂ ‘ಶಂಕರ್ ಐ.ಪಿ.ಎಸ್’ ಚಿತ್ರಗಳನ್ನು ಕೆ. ಮಂಜು ನಿರ್ಮಿಸಿದ್ದರು. ನಿರ್ಮಾಪಕ ರಮೇಶ್ ಯಾದವ್ ಅವರಿಗೆ ವಿಜಯ್ ಅವರ ಜೊತೆಗೆ ಇದು ಮೊದಲ ಚಿತ್ರ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಜಾರಿಯಲ್ಲಿದೆ.
‘ಮಾರುತ’ ಪ್ರತಿಯೊಬ್ಬರ ಮನೆಯ ಕಥೆ ಎಂದು ಚಿತ್ರತಂಡ ಹೇಳಿಕೊಂಡಿದೆ. ನಮಗೆ ಗೊತ್ತಿಲ್ಲದ ಹಾಗೆ ನಮ್ಮನ್ನೆಲ್ಲಾ ಅವರಿಸಿಕೊಂಡಿರುವ ಒಂದು ಭೂತದಿಂದ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಸುತ್ತ ಈ ಚಿತ್ರ ಸುತ್ತುತ್ತದಂತೆ.
ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಧಾರವಾಡ, ಕೂಡಲ ಸಂಗಮ, ಸವದತ್ತಿ, ಬೆಳಗಾವಿ, ಗೋವಾ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇತ್ತೀಚೆಗೆ ಬೆಂಗಳೂರು ಸಮೀಪ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆಯಲಾಯಿತು.
‘ಮಾರುತ’ ಚಿತ್ರದಲ್ಲಿ ವಿಜಯ್, ಶ್ರೇಯಸ್ ಮಂಜು ಜೊತೆಗೆ ಬೃಂದಾ ಆಚಾರ್ಯ, ಸಾಧು ಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ ಮುಂತಾದವರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿ. ರವಿಚಂದ್ರನ್ ಸಹ ನಟಿಸಿದ್ದಾರಂತೆ.
ಎಸ್. ನಾರಾಯಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಪಿ.ಕೆ.ಹೆಚ್, ದಾಸ್ ಛಾಯಾಗ್ರಹಣವಿದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…