ಮನರಂಜನೆ

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ ಲಗ್ಗೆ ಇಟ್ಟಿದೆ.

ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ.

ತೆರೆಮರೆಯಲ್ಲೆ ಇದ್ದ ಪ್ರತಿಭಾವಂತ ನಟ ಅಕ್ಷಯ್‌ ಖನ್ನಾ ಈ ಚಿತ್ರದಿಂದ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ. ಇದರ ಪರಿಣಾಮವಾಗಿ ಅವರು ‘ದೃಶ್ಯಂ 3’ ನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಆಗಿರುವುದು ದುಬಾರಿ ಸಂಭಾವನೆಯೂ ಒಂದು. ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ರೆಹಮಾನ್ ಡಕಾಯಿತ್ ಎಂಬ ಪಾತ್ರವನ್ನು ಮಾಡಿದ್ದಾರೆ. ಇದು ವಿಲನ್ ಪಾತ್ರ. ಈ ಪಾತ್ರಕ್ಕಾಗಿ ಅವರು 2.5 ಕೋಟಿಯಿಂದ 3 ಕೋಟಿ ರೂಪಾಯಿ ತನಕ ಸಂಭಾವನೆ ಪಡೆದಿದ್ದರು ಎಂಬ ಮಾಹಿತಿ ಹರಿದಾಡುತ್ತಿದೆ. ‘ಧುರಂಧರ್’ ಸೂಪರ್ ಹಿಟ್ ಆಗಿದ್ದೇ ತಡ, ಅಕ್ಷಯ್ ಖನ್ನಾ ಅವರು ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:-ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ. ಅಲ್ಲದೇ, ಅಕ್ಷಯ್ ಖನ್ನಾ ಅವರು ತಮ್ಮ ಪಾತ್ರದ ಲುಕ್ ಕೂಡ ಬದಲಾಗಬೇಕು ಎಂದು ಹಠ ಹಿಡಿದಿದ್ದಾರಂತೆ. ಈ ವಿಚಾರದಲ್ಲಿ ಚಿತ್ರತಂಡದ ಜೊತೆ ಮಾತುಕಥೆ ನಡೆದು, ಸಫಲವಾಗದ ಪರಿಣಾಮ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಆದರೆ ಈ ಎಲ್ಲಾ ಅಂತೆ ಕಂತೆಗಳಿಗೆ ಚಿತ್ರತಂಡವಾಗಲಿ ಅಥವಾ ನಟ ಅಕ್ಷಯ್‌ ಖನ್ನಾ ಆಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

2 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

2 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

4 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

6 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

6 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

6 hours ago