ಮನರಂಜನೆ

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ ಲಗ್ಗೆ ಇಟ್ಟಿದೆ.

ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ.

ತೆರೆಮರೆಯಲ್ಲೆ ಇದ್ದ ಪ್ರತಿಭಾವಂತ ನಟ ಅಕ್ಷಯ್‌ ಖನ್ನಾ ಈ ಚಿತ್ರದಿಂದ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ. ಇದರ ಪರಿಣಾಮವಾಗಿ ಅವರು ‘ದೃಶ್ಯಂ 3’ ನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಆಗಿರುವುದು ದುಬಾರಿ ಸಂಭಾವನೆಯೂ ಒಂದು. ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ರೆಹಮಾನ್ ಡಕಾಯಿತ್ ಎಂಬ ಪಾತ್ರವನ್ನು ಮಾಡಿದ್ದಾರೆ. ಇದು ವಿಲನ್ ಪಾತ್ರ. ಈ ಪಾತ್ರಕ್ಕಾಗಿ ಅವರು 2.5 ಕೋಟಿಯಿಂದ 3 ಕೋಟಿ ರೂಪಾಯಿ ತನಕ ಸಂಭಾವನೆ ಪಡೆದಿದ್ದರು ಎಂಬ ಮಾಹಿತಿ ಹರಿದಾಡುತ್ತಿದೆ. ‘ಧುರಂಧರ್’ ಸೂಪರ್ ಹಿಟ್ ಆಗಿದ್ದೇ ತಡ, ಅಕ್ಷಯ್ ಖನ್ನಾ ಅವರು ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:-ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ. ಅಲ್ಲದೇ, ಅಕ್ಷಯ್ ಖನ್ನಾ ಅವರು ತಮ್ಮ ಪಾತ್ರದ ಲುಕ್ ಕೂಡ ಬದಲಾಗಬೇಕು ಎಂದು ಹಠ ಹಿಡಿದಿದ್ದಾರಂತೆ. ಈ ವಿಚಾರದಲ್ಲಿ ಚಿತ್ರತಂಡದ ಜೊತೆ ಮಾತುಕಥೆ ನಡೆದು, ಸಫಲವಾಗದ ಪರಿಣಾಮ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಆದರೆ ಈ ಎಲ್ಲಾ ಅಂತೆ ಕಂತೆಗಳಿಗೆ ಚಿತ್ರತಂಡವಾಗಲಿ ಅಥವಾ ನಟ ಅಕ್ಷಯ್‌ ಖನ್ನಾ ಆಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago