ಮನರಂಜನೆ

ಒಂದು ತಿಂಗಳು ಮುಂದಕ್ಕೆ ಹೋಯ್ತು ’ಎಕ್ಕ’ ಚಿತ್ರದ ಬಿಡುಗಡೆ

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ.

`ಎಕ್ಕ’ ಚಿತ್ರದ ಚಿತ್ರೀಕರಣ ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿತ್ತು. ಮುಹೂರ್ತದ ದಿನವೇ ಚಿತ್ರವನ್ನು ಜೂನ್‍.06ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಚಿತ್ರದ ಬಿಡುಗಡೆ ಹತ್ತಿರ ಬಂದರೂ, ಚಿತ್ರದ ಕೆಲಸಗಳು ಪೂರ್ತಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿತ್ರದ ಬಿಡುಗಡೆಯನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಜುಲೈ.18ರಂದು ಚಿತ್ರ ಬಿಡುಗಡೆಯಾಗಲಿದೆ.

ರೋಹಿತ್‍ ಪದಕಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಯುವಗೆ ಸಂಜನಾ ಆನಂದ್‍ ಮತ್ತು ಸಂಪದ ನಾಯಕಿಯರಾಗಿ ನಟಿಸಿದ್ದು, ಮಿಕ್ಕಂತೆ ಅತುಲ್ ಕುಲಕರ್ಣಿ, ಆದಿತ್ಯ, ಶ್ರುತಿ, ಪೂರ್ಣಚಂದ್ರ ಮೈಸೂರು, ಪುನೀತ್‍ ರುದ್ರನಾಗ್‍, ಸಾಧು ಕೋಕಿಲ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್‍ ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷ ಒಂಬತ್ತು ಸೆಕೆಂಡ್‌ ಇರುವ ಟೀಸರ್‌ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಮಗು-ಮೃಗ ಎಂದು ಮಸ್ತ್‌ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇದು ಇಲ್ಲಿಗೆ ನಿಲ್ಲೋದಿಲ್ಲ …’ ಎಂದು ದೊಡ್ಡದಾಗಿ ಏನೋ ಸೂಚನೆ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

4 mins ago

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

44 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

55 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

1 hour ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

1 hour ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago