ಮನರಂಜನೆ

ಒಂದು ತಿಂಗಳು ಮುಂದಕ್ಕೆ ಹೋಯ್ತು ’ಎಕ್ಕ’ ಚಿತ್ರದ ಬಿಡುಗಡೆ

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ.

`ಎಕ್ಕ’ ಚಿತ್ರದ ಚಿತ್ರೀಕರಣ ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿತ್ತು. ಮುಹೂರ್ತದ ದಿನವೇ ಚಿತ್ರವನ್ನು ಜೂನ್‍.06ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಚಿತ್ರದ ಬಿಡುಗಡೆ ಹತ್ತಿರ ಬಂದರೂ, ಚಿತ್ರದ ಕೆಲಸಗಳು ಪೂರ್ತಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿತ್ರದ ಬಿಡುಗಡೆಯನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಜುಲೈ.18ರಂದು ಚಿತ್ರ ಬಿಡುಗಡೆಯಾಗಲಿದೆ.

ರೋಹಿತ್‍ ಪದಕಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಯುವಗೆ ಸಂಜನಾ ಆನಂದ್‍ ಮತ್ತು ಸಂಪದ ನಾಯಕಿಯರಾಗಿ ನಟಿಸಿದ್ದು, ಮಿಕ್ಕಂತೆ ಅತುಲ್ ಕುಲಕರ್ಣಿ, ಆದಿತ್ಯ, ಶ್ರುತಿ, ಪೂರ್ಣಚಂದ್ರ ಮೈಸೂರು, ಪುನೀತ್‍ ರುದ್ರನಾಗ್‍, ಸಾಧು ಕೋಕಿಲ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್‍ ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷ ಒಂಬತ್ತು ಸೆಕೆಂಡ್‌ ಇರುವ ಟೀಸರ್‌ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಮಗು-ಮೃಗ ಎಂದು ಮಸ್ತ್‌ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇದು ಇಲ್ಲಿಗೆ ನಿಲ್ಲೋದಿಲ್ಲ …’ ಎಂದು ದೊಡ್ಡದಾಗಿ ಏನೋ ಸೂಚನೆ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago