eltu mutta kannada movie
ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಗಾಯಕಿ ಸಂಗೀತ ಕಟ್ಟಿ, ಎ.ಎಂ.ಆರ್ ರಮೇಶ್ ಸಮಾರಂಭಕ್ಕೆ ಬಂದು ಹೊಸಬರ ಕನಸಿಗೆ ಬೆಂಬಲವಾಗಿ ನಿಂತಿದ್ದರು.
ಈಗ ಒಂದು ವರ್ಷದ ನಂತರ ಚಿತ್ರದ ಚಿತ್ರೀಕರಣ ಮುಗಿದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಇದನ್ನು ಹೇಳಲೆಂದೇ, ಚಿತ್ರತಂಡದವರು ಮಾಧ್ಯಮದವರ ಮುಂದೆ ಬಂದಿದ್ದರು. ಮೊದಲು ಮಾತನಾಡಿದ ನಿರ್ಮಾಪಕ ಸತ್ಯ ಶ್ರೀನಿವಾಸನ್, ‘ಒಳ್ಳೆಯ ಸಿನಿಮಾ ಮಾಡಬೇಕು ಮತ್ತು ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಬೇಕು ಎಂಬ ಎರಡು ಕಾರಣಗಳಿಗೆ ಈ ಸಂಸ್ಥೆಯನ್ನು ಪ್ರಾರಂಭಿಸಿದ್ದೆವು. ಮೊದಲ ಹಂತವಾಗಿ ‘ಎಲ್ಟು ಮುತ್ತಾ’ ಚಿತ್ರ ಮಾಡಿದ್ದೇವೆ. ಸುಮಾರು 50 ದಿನಗಳ ಕಾಲ ಕೊಡಗು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಿದ್ದೇವೆ’ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:- ‘ಎಡಗೈ’ ಜೊತಯಾದ ‘ಬ್ಲಿಂಕ್’ ಮತ್ತು ‘ಶಾಖಹಾರಿ’ ನಿರ್ಮಾಪಕರು
ನಿರ್ದೇಶಕರಾದ ರಾ. ಸೂರ್ಯ ಮಾತನಾಡಿ, ‘ಎಲ್ಟು ಮುತ್ತಾ ಎಂಬುದು ಎರಡು ಪಾತ್ರಗಳ ಸುತ್ತ ನಡೆಯುವ ಕಥೆ. ಟೆಕ್ನಿಷನ್ ಆಗಬೇಕು ಎಂದು ಬಂದವರು ಈ ಚಿತ್ರದಲ್ಲಿ ನಟಿಸಿದ್ದೇವೆ’ ಎಂದರು.
ನಾಯಕ ಶೌರ್ಯ ಪ್ರತಾಪ್ ಮಾತನಾಡಿ, ‘ನಮ್ಮದು ಹೊಸತಂಡ. ಜನ ದುಡ್ಡು ಕೊಟ್ಟು ನಮ್ಮ ಚಿತ್ರವನ್ನು ಏಕೆ ನೋಡಬೇಕು? ಎಂದು ನಾವೇ ಪ್ರಶ್ನೆಗಳನ್ನು ಹಾಕಿಕೊಂಡಿದ್ದೇವೆ. ನಮ್ಮನ್ನು ನೋಡಿ ಜನ ಚಿತ್ರಮಂದಿರಕ್ಕೆ ಬರುವುದು ಬೇಡ. ಚಿತ್ರದ ಕಂಟೆಂಟ್ ನೋಡಿ ಬರಲಿ’ ಎಂದರು.
ಶೌರ್ಯ ಪ್ರತಾಪ್ಗೆ ನಾಯಕಿಯಾಗಿ ಪ್ರಿಯಾಂಕಾ ಮಳಲಿ ನಟಿಸಿದ್ದು, ಮಿಕ್ಕಂತೆ ‘ಕಾಕ್ರೋಚ್’ ಸುಧಿ, ಯಮುನಾ ಶ್ರೀನಿಧಿ, ನವೀನ್ ಪಡಿಲ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಕೇಶವ ಸಂಗೀತ, ಮೆಯ್ಯಪ್ಪ ಭಾಸ್ಕರ್ ಛಾಯಾಗ್ರಹಣವಿದೆ. ಈ ಚಿತ್ರವನ್ನು ಹೈ5 ಸ್ಟುಡಿಯೋಸ್ ಮೂಲಕ ನಿರ್ದೇಶಕ ರಾ ಸೂರ್ಯ, ಶೌರ್ಯ ಪ್ರತಾಪ್, ಪ್ರಸನ್ನ ಕೇಶವ, ರುಹಾನ್ ಆರ್ಯ ಹಾಗೂ ಬಸವರಾಜೇಶ್ವರಿ ಭೂಮರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…