ಮನರಂಜನೆ

ಎರಡು ಪಾತ್ರಗಳ ಸುತ್ತ ಸುತ್ತುವ ʼಎಲ್ಟು ಮುತ್ತಾʼ ಬಿಡುಗಡೆಗೆ ಸಿದ್ಧ

ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಗಾಯಕಿ ಸಂಗೀತ ಕಟ್ಟಿ, ಎ.ಎಂ.ಆರ್ ರಮೇಶ್ ಸಮಾರಂಭಕ್ಕೆ ಬಂದು ಹೊಸಬರ ಕನಸಿಗೆ ಬೆಂಬಲವಾಗಿ ನಿಂತಿದ್ದರು.

ಈಗ ಒಂದು ವರ್ಷದ ನಂತರ ಚಿತ್ರದ ಚಿತ್ರೀಕರಣ ಮುಗಿದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಇದನ್ನು ಹೇಳಲೆಂದೇ, ಚಿತ್ರತಂಡದವರು ಮಾಧ್ಯಮದವರ ಮುಂದೆ ಬಂದಿದ್ದರು. ಮೊದಲು ಮಾತನಾಡಿದ ನಿರ್ಮಾಪಕ ಸತ್ಯ ಶ್ರೀನಿವಾಸನ್, ‘ಒಳ್ಳೆಯ ಸಿನಿಮಾ ಮಾಡಬೇಕು ಮತ್ತು ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಬೇಕು ಎಂಬ ಎರಡು ಕಾರಣಗಳಿಗೆ ಈ ಸಂಸ್ಥೆಯನ್ನು ಪ್ರಾರಂಭಿಸಿದ್ದೆವು. ಮೊದಲ ಹಂತವಾಗಿ ‘ಎಲ್ಟು ಮುತ್ತಾ’ ಚಿತ್ರ ಮಾಡಿದ್ದೇವೆ. ಸುಮಾರು 50 ದಿನಗಳ ಕಾಲ ಕೊಡಗು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಿದ್ದೇವೆ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:- ‘ಎಡಗೈ’ ಜೊತಯಾದ ‘ಬ್ಲಿಂಕ್’ ಮತ್ತು ‘ಶಾಖಹಾರಿ’ ನಿರ್ಮಾಪಕರು

ನಿರ್ದೇಶಕರಾದ ರಾ. ಸೂರ್ಯ ಮಾತನಾಡಿ, ‘ಎಲ್ಟು ಮುತ್ತಾ ಎಂಬುದು ಎರಡು ಪಾತ್ರಗಳ ಸುತ್ತ ನಡೆಯುವ ಕಥೆ. ಟೆಕ್ನಿಷನ್‌ ಆಗಬೇಕು ಎಂದು ಬಂದವರು ಈ ಚಿತ್ರದಲ್ಲಿ ನಟಿಸಿದ್ದೇವೆ’ ಎಂದರು.

ನಾಯಕ ಶೌರ್ಯ ಪ್ರತಾಪ್ ಮಾತನಾಡಿ, ‘ನಮ್ಮದು ಹೊಸತಂಡ. ಜನ ದುಡ್ಡು ಕೊಟ್ಟು ನಮ್ಮ ಚಿತ್ರವನ್ನು ಏಕೆ ನೋಡಬೇಕು? ಎಂದು ನಾವೇ ಪ್ರಶ್ನೆಗಳನ್ನು ಹಾಕಿಕೊಂಡಿದ್ದೇವೆ. ನಮ್ಮನ್ನು ನೋಡಿ ಜನ ಚಿತ್ರಮಂದಿರಕ್ಕೆ ಬರುವುದು ಬೇಡ. ಚಿತ್ರದ ಕಂಟೆಂಟ್‌ ನೋಡಿ ಬರಲಿ’ ಎಂದರು.

ಶೌರ್ಯ ಪ್ರತಾಪ್‍ಗೆ ನಾಯಕಿಯಾಗಿ ಪ್ರಿಯಾಂಕಾ ಮಳಲಿ ನಟಿಸಿದ್ದು, ಮಿಕ್ಕಂತೆ ‘ಕಾಕ್ರೋಚ್’ ಸುಧಿ, ಯಮುನಾ ಶ್ರೀನಿಧಿ, ನವೀನ್ ಪಡಿಲ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಕೇಶವ ಸಂಗೀತ, ಮೆಯ್ಯಪ್ಪ ಭಾಸ್ಕರ್ ಛಾಯಾಗ್ರಹಣವಿದೆ. ಈ ಚಿತ್ರವನ್ನು ಹೈ5 ಸ್ಟುಡಿಯೋಸ್ ಮೂಲಕ ನಿರ್ದೇಶಕ ರಾ ಸೂರ್ಯ, ಶೌರ್ಯ ಪ್ರತಾಪ್, ಪ್ರಸನ್ನ ಕೇಶವ, ರುಹಾನ್ ಆರ್ಯ ಹಾಗೂ ಬಸವರಾಜೇಶ್ವರಿ ಭೂಮರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

7 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

8 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

10 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

11 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

14 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

14 hours ago