elumale
ರಕ್ಷಿತಾ ಪ್ರೇಮ್ ಸಹೋದರ ರಾಣ, ‘ಏಳುಮಲೆ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಈಗಾಗಲೇ ಗೊತ್ತಿರದೆ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಏಕ್ ಲವ್ ಯಾ’ ಚಿತ್ರದ ನಂತರ ರಾಣ ಅಭಿನಯಿಸುತ್ತಿರುವ ಎರಡನೇ ಚಿತ್ರ ಇದು. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ನಿರ್ದೇಶನ ಮಾಡಿರುವ ಈ ಚಿತ್ರವು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಸೆ..05ರಂದು ಬಿಡುಗಡೆಯಾಗುತ್ತಿದೆ.
ತರುಣ್ ಸುಧೀರ್ ಮತ್ತು ಅಟ್ಲಾಂಟ ನಾಗೇಂದ್ರ ಜೊತೆಗೆ ನಿರ್ಮಿಸುತ್ತಿರುವ ‘ಏಳುಮಲೆ’ ಚಿತ್ರವು ತನ್ನ ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ‘ಏಳುಮಲೆ’ ಸಿನಿಮಾದಲ್ಲಿ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ. 90ರ ದಶಕದ ಕಾಲಘಟ್ಟದಲ್ಲಿ ನಡೆದ ಕಥೆಯನ್ನು ಈ ಚಿತ್ರ ಹೇಳುತ್ತದೆ. ಚಿತ್ರಕ್ಕೆ ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ’ ಎಂಬ ಟ್ಯಾಗ್ಲೈನ್ ನೀಡಲಾಗಿದೆ. ಈ ಚಿತ್ರವು ಕನ್ನಡವಲ್ಲದೆ ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ.
‘ಏಳುಮಲೆ’ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಮುಂತಾದವರು ನಟಿಸಿದ್ದಾರೆ.
ಚಿತ್ರಕ್ಕೆ ಅದ್ವೈತ್ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಡಿ ಇಮ್ಮನ್ ಸಂಗೀತ ಚಿತ್ರಕ್ಕಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…