ಮನರಂಜನೆ

‘ಏಳುಮಲೆ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ರಕ್ಷಿತಾ ಪ್ರೇಮ್ ಸಹೋದರ ರಾಣ, ‘ಏಳುಮಲೆ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಈಗಾಗಲೇ ಗೊತ್ತಿರದೆ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಏಕ್‍ ಲವ್‍ ಯಾ’ ಚಿತ್ರದ ನಂತರ ರಾಣ ಅಭಿನಯಿಸುತ್ತಿರುವ ಎರಡನೇ ಚಿತ್ರ ಇದು. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ನಿರ್ದೇಶನ ಮಾಡಿರುವ ಈ ಚಿತ್ರವು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಸೆ..05ರಂದು ಬಿಡುಗಡೆಯಾಗುತ್ತಿದೆ.

ತರುಣ್ ಸುಧೀರ್ ಮತ್ತು ಅಟ್ಲಾಂಟ ನಾಗೇಂದ್ರ ಜೊತೆಗೆ ನಿರ್ಮಿಸುತ್ತಿರುವ ‘ಏಳುಮಲೆ’ ಚಿತ್ರವು ತನ್ನ ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ‘ಏಳುಮಲೆ’ ಸಿನಿಮಾದಲ್ಲಿ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಚಾಮರಾಜನಗರ, ಸೇಲಂ, ಈರೋಡ್‌ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ. 90ರ ದಶಕದ ಕಾಲಘಟ್ಟದಲ್ಲಿ ನಡೆದ ಕಥೆಯನ್ನು ಈ ಚಿತ್ರ ಹೇಳುತ್ತದೆ. ಚಿತ್ರಕ್ಕೆ ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ’ ಎಂಬ ಟ್ಯಾಗ್‍ಲೈನ್‍ ನೀಡಲಾಗಿದೆ. ಈ ಚಿತ್ರವು ಕನ್ನಡವಲ್ಲದೆ ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ.

‘ಏಳುಮಲೆ’ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಅದ್ವೈತ್‌ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ಡಿ ಇಮ್ಮನ್‌ ಸಂಗೀತ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

5 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

5 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

6 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

6 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

7 hours ago