ಮನರಂಜನೆ

ಬಿ. ಸರೋಜಾದೇವಿ ಅವರಿಗೆ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ

ಕಳೆದ ತಿಂಗಳು ನಿಧನರಾದ ಹಿರಿಯ ನಟಿ, ‘ಅಭಿನಯ ಸರಸ್ವತಿ’, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಕೋರಲು ಇತ್ತೀಚಿಗೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು.

ಈ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ತಮಿಳು ಚಿತ್ರರಂಗದ ಹಲವು ಕಲಾವಿದರು, ತಂತ್ರಜ್ಞರು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘ, ಕಲಾವಿದರ ಸಂಘ ಮುಂತಾದ ಚಿತ್ರರಂಗದ ಸಂಘಟನೆಗಳಿಂದ ಆಯೋಜನೆ ಮಾಡಲಾಗಿತ್ತು. ಸರೋಜಾದೇವಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಸರೋಜಾದೇವಿ ಅವರು ನಡೆದು ಬಂದ ದಾರಿಯ ವಿಡಿಯೋ ಪ್ರದರ್ಶನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಟ-ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ‘ಈ ಕಾರ್ಯಕ್ರಮವನ್ನು ಕಲಾವಿದರ ಸಂಘದಲ್ಲಿ ನಡೆಸಲು ಕಾರಣವಿದೆ. ಈ ಕಟ್ಟಡ ಆಗಲು ಸರೋಜಮ್ಮನವರ ಶ್ರಮ ಕೂಡ ತುಂಬಾ ಇದೆ. ಇಡೀ ಚಿತ್ರರಂಗ ಒಂದು ಕುಟುಂಬವಾಗಿ ಈ ಕಾರ್ಯಕ್ರಮ ನಡೆಸುತ್ತಿದ್ದೇವೆ. ಬೇರೆಬೇರೆ ಚಿತ್ರರಂಗದಿಂದ ನಟರಾದ ನಾಸರ್, ಕಲಾವತಿ ಆಗಮಿಸಿದ್ದಾರೆ. ಕಲಾವಿದರ ಭವನ ಕಟ್ಟುವುದು ರಾಜಕುಮಾರ್ ಅವರ ಕನಸಾಗಿತ್ತು. ಅದನ್ನು ಅಂಬರೀಶ್ ಅವರು ನನಸು ಮಾಡಿದರು. ಈ ಭವನ ಕಟ್ಟಲು ಸರೋಜಾದೇವಿ ಅವರು ಅಧ್ಯಕ್ಷರಾಗಿದ್ದರು’ ಎಂದು ತಮ್ಮ ಹಾಗೂ ಸರೋಜಾದೇವಿ ಅವರ ಒಡನಾಟ ನೆನೆದು ಬಾವುಕರಾದರು.

ನಂತರ ಮಾತನಾಡಿದ ಸುಮಲಾತಾ ಅಂಬರೀಶ್, ‘ಈ ಭವನ ಮಾಡಲು ರಾಜಕುಮಾರ್ ಹಾಗೂ ಅಂಬರೀಶ್ ಅವರಂತೆಯೇ ಸರೋಜಾ ದೇವಿ ಅವರ ಶ್ರಮ ಕೂಡ ಇದೆ. ಇಂತಹ ಭವನ ಇಡೀ ದೇಶದಲ್ಲೇ ಇಲ್ಲ. ಇಂತಹ ಭವನವನ್ನು ಕಲಾವಿದರು ಚನ್ನಾಗಿ ಬಳಸಿಕೊಂಡು, ಮುಂದುವರೆಸಿಕೊಂಡು ಹೋಗಬೇಕು’ ಎಂದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಶ‍್ರೀನಿವಾಸಮೂರ್ತಿ, ನಾಜರ್‍, ಅನು ಪ್ರಭಾಕರ್, ರಘು ಮುಖರ್ಜಿ, ‘ನೆನಪಿರಲಿ’ ಪ್ರೇಮ್, ಸುಮಲತಾ ಅಂಬರೀಶ್, ಮುಖ್ಯಮಂತ್ರಿ ಚಂದ್ರು, ಸುಂದರರಾಜ್, ರಾಮಕೃಷ್ಣ, ಗಿರಿಜಾ ಲೋಕೇಶ್ ಮುಂತಾದವರು ಭಾಗವಹಿಸಿ ಅನುಭವ ಹಂಚಿಕೊಂಡರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago