ಮನರಂಜನೆ

ಮುಕ್ತಾಯದ ಹಂತದಲ್ಲಿ ಕೃಷ್ಣ ಅಭಿನಯದ ‘ಫಾದರ್‍’

ಆರ್‍. ಚಂದ್ರು ಈ ವರ್ಷ ಪ್ರಾರಂಭಿಸಿದ ಆರ್‍.ಸಿ.ಸ್ಟುಡಿಯೋಸ್‍ನಡಿ ಪ್ರಾರಂಭವಾದ ಮೊದಲ ಚಿತ್ರ ‘ಫಾದರ್’, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ತಂದೆ-ಮಗನ ಸಂಬಂಧದ ಕುರಿತಾದ ಚಿತ್ರ ಇದಾಗಿದ್ದು, ತಂದೆಯಾಗಿ ಪ್ರಕಾಶ್‍ ರೈ ಮತ್ತು ಮಗನಾಗಿ ‘ಡಾರ್ಲಿಂಗ್‍’ ಕೃಷ್ಣ ನಟಿಸುತ್ತಿದ್ದಾರೆ.

ರಾಜ್ ಮೋಹನ್ ನಿರ್ದೇಶನದಲ್ಲಿ ‘ಫಾದರ್’ ಚಿತ್ರವು ಮೂಡಿಬರುತ್ತಿದ್ದು ಕೊನೆಯ ಹಂತದ ಶೂಟಿಂಗ್ ಆನೇಕಲ್ ತಾಲೂಕಿನ ಐತಿಹಾಸಿಕ ದೇವಾಲಯ ಶ್ರೀ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ನಡೆಯಿತು. ದೇವಸ್ಥಾನದ ಮುಂಭಾಗದಲ್ಲಿ ನೂರಾರು ಜನ ಜೂನಿಯರ್ ಆರ್ಟಿಸ್ಟ್ ಗಳ ಸಮ್ಮುಖದಲ್ಲಿ ‘ಫಾದರ್’ ಚಿತ್ರದ ಸಾಹಸ ದೃಶ್ಯಗಳು ಚಿತ್ರೀಕರಣವಾಗಿದೆ. ಕೃಷ್ಣ ಫೈಟರ್‍ಗಳೊಂದಿಗೆ ಸೆಣಸಾಡುವ ದೃಶ್ಯಗಳನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು.

ಈ ಹಿಂದೆ ‘ಬೈರಾಗಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ರಾಜ್‍ ಮೋಹನ್‍ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರಾಮ್‍ ಮೋಹನ್‍ ಅವರಿಗೆ ನಿರ್ದೇಶಕರಾಗಿ ಇದು ಮೊದಲ ಚಿತ್ರ. ನಿರ್ದೇಶಕ ದಯಾಳ್‍ ಪದ್ಮನಾಭನ್‍, ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

‘ಫಾದರ್‍’ ಚಿತ್ರಕ್ಕೆ ರಾಜ್‍ ಮೋಹನ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜ್ಞಾನಮೂರ್ತಿ ಛಾಯಾಗ್ರಹಣ ‘ಹನುಮಾನ್’ ಖ್ಯಾತಿಯ ಗೌರಾ ಹರಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ‘ಡಾರ್ಲಿಂಗ್‍’ ಕೃಷ್ಣ, ಪ್ರಕಾಶ್‍ ರೈ, ಅಮೃತಾ ಅಯ್ಯಂಗಾರ್‍, ತೆಲುಗು ನಟ ಸುನೀಲ್‍ ಮುಂತಾದವರು ನಟಿಸಿದ್ದಾರೆ.

ಇದಲ್ಲದೆ ಆರ್‍. ಚಂದ್ರು ಅವರ ಆರ್‍.ಸಿ. ಸ್ಟುಡಿಯೋಸ್‍ ವತಿಯಿಂದ ‘ಶ್ರೀ ರಾಮ ಬಾಣ’, ‘ಕಬ್ಜ 2’, ‘ಪಿಓಕೆ’ ಮತ್ತು ‘ಡಾಗ್’ ಚಿತ್ರಗಳು ನಿರ್ಮಾಣವಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

1 min ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

15 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

20 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

51 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago