ಮನರಂಜನೆ

ಮುಕ್ತಾಯದ ಹಂತದಲ್ಲಿ ಕೃಷ್ಣ ಅಭಿನಯದ ‘ಫಾದರ್‍’

ಆರ್‍. ಚಂದ್ರು ಈ ವರ್ಷ ಪ್ರಾರಂಭಿಸಿದ ಆರ್‍.ಸಿ.ಸ್ಟುಡಿಯೋಸ್‍ನಡಿ ಪ್ರಾರಂಭವಾದ ಮೊದಲ ಚಿತ್ರ ‘ಫಾದರ್’, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ತಂದೆ-ಮಗನ ಸಂಬಂಧದ ಕುರಿತಾದ ಚಿತ್ರ ಇದಾಗಿದ್ದು, ತಂದೆಯಾಗಿ ಪ್ರಕಾಶ್‍ ರೈ ಮತ್ತು ಮಗನಾಗಿ ‘ಡಾರ್ಲಿಂಗ್‍’ ಕೃಷ್ಣ ನಟಿಸುತ್ತಿದ್ದಾರೆ.

ರಾಜ್ ಮೋಹನ್ ನಿರ್ದೇಶನದಲ್ಲಿ ‘ಫಾದರ್’ ಚಿತ್ರವು ಮೂಡಿಬರುತ್ತಿದ್ದು ಕೊನೆಯ ಹಂತದ ಶೂಟಿಂಗ್ ಆನೇಕಲ್ ತಾಲೂಕಿನ ಐತಿಹಾಸಿಕ ದೇವಾಲಯ ಶ್ರೀ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ನಡೆಯಿತು. ದೇವಸ್ಥಾನದ ಮುಂಭಾಗದಲ್ಲಿ ನೂರಾರು ಜನ ಜೂನಿಯರ್ ಆರ್ಟಿಸ್ಟ್ ಗಳ ಸಮ್ಮುಖದಲ್ಲಿ ‘ಫಾದರ್’ ಚಿತ್ರದ ಸಾಹಸ ದೃಶ್ಯಗಳು ಚಿತ್ರೀಕರಣವಾಗಿದೆ. ಕೃಷ್ಣ ಫೈಟರ್‍ಗಳೊಂದಿಗೆ ಸೆಣಸಾಡುವ ದೃಶ್ಯಗಳನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು.

ಈ ಹಿಂದೆ ‘ಬೈರಾಗಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ರಾಜ್‍ ಮೋಹನ್‍ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರಾಮ್‍ ಮೋಹನ್‍ ಅವರಿಗೆ ನಿರ್ದೇಶಕರಾಗಿ ಇದು ಮೊದಲ ಚಿತ್ರ. ನಿರ್ದೇಶಕ ದಯಾಳ್‍ ಪದ್ಮನಾಭನ್‍, ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

‘ಫಾದರ್‍’ ಚಿತ್ರಕ್ಕೆ ರಾಜ್‍ ಮೋಹನ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜ್ಞಾನಮೂರ್ತಿ ಛಾಯಾಗ್ರಹಣ ‘ಹನುಮಾನ್’ ಖ್ಯಾತಿಯ ಗೌರಾ ಹರಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ‘ಡಾರ್ಲಿಂಗ್‍’ ಕೃಷ್ಣ, ಪ್ರಕಾಶ್‍ ರೈ, ಅಮೃತಾ ಅಯ್ಯಂಗಾರ್‍, ತೆಲುಗು ನಟ ಸುನೀಲ್‍ ಮುಂತಾದವರು ನಟಿಸಿದ್ದಾರೆ.

ಇದಲ್ಲದೆ ಆರ್‍. ಚಂದ್ರು ಅವರ ಆರ್‍.ಸಿ. ಸ್ಟುಡಿಯೋಸ್‍ ವತಿಯಿಂದ ‘ಶ್ರೀ ರಾಮ ಬಾಣ’, ‘ಕಬ್ಜ 2’, ‘ಪಿಓಕೆ’ ಮತ್ತು ‘ಡಾಗ್’ ಚಿತ್ರಗಳು ನಿರ್ಮಾಣವಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

2 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

6 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

22 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

23 hours ago