ಮನರಂಜನೆ

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಸೋನುಗೌಡ ಬಂಧನ: ಅಸಲಿ ಕಾರಣ ಇಲ್ಲಿದೆ?

ಮಗುವನ್ನು ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿ ಸೋನುಗೌಡ ಅವರನ್ನು ಬ್ಯಾಡರ ಹಳ್ಳಿ ಪೊಲೀಸರು ಇಂದು (ಮಾ.೨೨) ಬಂಧಿಸಿದ್ದಾರೆ.

ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದಡಿಯಲ್ಲಿ ಸೋನು ವಿರದ್ಧ ಪ್ರಕರಣ ದಾಖಲಾಗಿದ್ದು, ಮಕ್ಕಳ ರಕ್ಷಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್‌ ಜಂಟಿ ಕಾರ್ಯಾಚರಣೆ ವೇಳೆ ಸೋನು ಗೌಡ ಅವರ ಬಂಧನವಾಗಿದೆ.

ಸ್ವಲ್ಪ ದಿನಗಳ ಹಿದೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಗುವನ್ನು ದತ್ತು ಪಡೆದ ಬಗ್ಗೆ ಸ್ವತಃ ಸೋನು ಗೌಡ ಅವರೇ ಮಾಹಿತಿ ಹಂಚಿಕೊಂಡಿದ್ದರು. ಅದರಲ್ಲಿ ಆ ಮಗುವಿನ ಪರಿಚಯ ಕೂಡಾ ಮಾಡಿಕೊಟ್ಟಿದ್ದರು.

ಉತ್ತರ ಕರ್ನಾಟಕದ 8 ವರ್ಷದ ಮಗು ಅದಾಗಿದ್ದು, ಸಿಂಪತಿ ಗಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಸೋನು ಮುಂದಾಗಿದ್ದರು ಎನ್ನುವ ಆರೋಪವಿದ್ದು, ದತ್ತು ಪಡೆಯುವ ಯಾವುದೇ ನಿಯಮವನ್ನು ಪಾಲಿಸದೇ ಇರುವ ಕಾರಣಕ್ಕಾಗಿ ಮಕ್ಕಳ ಹಕ್ಕು ಕಸಿದಿರುವ ಆರೋಪ ಸೋನು ಮೇಲಿದೆ.

ಮಗುವನ್ನ ದತ್ತು ಪಡೆದ ಮೇಲೆ ಸುಳ್ಳು ಪ್ರಚಾರ ಪಡೆಯಲು ಸೋನು ತಂತ್ರ ರೂಪಿಸಿದ್ದಾರೆ ಎಂದು ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

17 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

18 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

18 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

18 hours ago