ಮನರಂಜನೆ

ನಟಿ ರಚಿತಾ ರಾಮ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಖ್ಯಾತ ನಿರ್ದೇಶಕ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ.

ಸಂಜು ವೆಡ್ಸ್‌ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್‌ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್‌ ವಿರುದ್ಧ ಮಂಗಳವಾರ ಫಿಲ್ಸ್‌ ಚೇಂಬರ್‌ಗೆ ದೂರು ಸಲ್ಲಿಸಿದ್ದಾರೆ.

ರಚಿತಾ ರಾಮ್‌ ಸಂಜು ವೆಡ್ಸ್‌ ಗೀತಾ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್‌ ಆಗುವ ಮತ್ತು ನಂತರ ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹೀಗಾಗಿ ನಟಿಯ ವಿರುದ್ಧ ಚಿತ್ರತಂಡ ದೂರು ನೀಡಿದ್ದು, ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದ ಒತ್ತಾಯಿಸಿದೆ.

ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್‌ ಯಾವುದೇ ಸಪೋರ್ಟ್‌ ಮಾಡಿಲ್ಲ. ರಾಕ್‌ಲೈನ್‌ ವೆಂಕಟೇಶ್‌ ಅವರು ಮನವೊಲಿಸಲು ಪ್ರಯತ್ನಿಸಿದ್ದರು ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್‌ ಮಾಡಿಲ್ಲ. ನಾವೇನು ಅವರಿಗೆ ಪೇಮೆಂಟ್‌ ಕಮ್ಮಿ ಕೊಟ್ಟಿಲ್ಲ ಎಂದು ನಿರ್ದೇಶಕ ನಾಗಶೇಖರ್‌ ಹಾಗೂ ನಾಯಕ ನಟ ಶ್ರೀನಗರ ಕಿಟ್ಟಿ ಫಿಲ್ಮ್‌ ಚೇಂಬರ್ಗ್‌ಗೆ ದೂರು ನೀಡಿದ್ದಾರೆ.

ಸಿನಿಮಾ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್‌ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿದ್ದಾರೆ.

ಈ ದೂರು ಕುರಿತು ನಟಿ ರಚಿತಾ ರಾಮ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

7 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

11 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

11 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

11 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

12 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

12 hours ago