ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ.
ಸಂಜು ವೆಡ್ಸ್ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಮಂಗಳವಾರ ಫಿಲ್ಸ್ ಚೇಂಬರ್ಗೆ ದೂರು ಸಲ್ಲಿಸಿದ್ದಾರೆ.
ರಚಿತಾ ರಾಮ್ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮತ್ತು ನಂತರ ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹೀಗಾಗಿ ನಟಿಯ ವಿರುದ್ಧ ಚಿತ್ರತಂಡ ದೂರು ನೀಡಿದ್ದು, ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದ ಒತ್ತಾಯಿಸಿದೆ.
ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಯಾವುದೇ ಸಪೋರ್ಟ್ ಮಾಡಿಲ್ಲ. ರಾಕ್ಲೈನ್ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದ್ದರು ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಮಾಡಿಲ್ಲ. ನಾವೇನು ಅವರಿಗೆ ಪೇಮೆಂಟ್ ಕಮ್ಮಿ ಕೊಟ್ಟಿಲ್ಲ ಎಂದು ನಿರ್ದೇಶಕ ನಾಗಶೇಖರ್ ಹಾಗೂ ನಾಯಕ ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್ಗ್ಗೆ ದೂರು ನೀಡಿದ್ದಾರೆ.
ಸಿನಿಮಾ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ನಲ್ಲಿ ಮೂಡಿಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿದ್ದಾರೆ.
ಈ ದೂರು ಕುರಿತು ನಟಿ ರಚಿತಾ ರಾಮ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…