ಮನರಂಜನೆ

ಸಿನಿಮಾ ಆಗುತ್ತಿದೆ ಪಂಕಜ್‍ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್‍’; 2026ರಲ್ಲಿ ಬಿಡುಗಡೆ

ಅಮೇಜಾನ್‍ ಪ್ರೈಮ್‍ನಲ್ಲಿರುವ ಜನಪ್ರಿಯ ವೆಬ್‍ ಸರಣಿಗಳ ಪೈಕಿ ಪಂಕಜ್‍ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್’ ಸಹ ಒಂದು. ಈಗ ಈ ವೆಬ್‍ಸರಣಿಯು ಸಿನಿಮಾ ಆಗಿ ರೂಪುಗೊಳ್ಳುತ್ತಿದ್ದು, ಇದನ್ನು ಅಮೇಜಾನ್‍ MGM ಸ್ಟುಡಿಯೋಸ್‍ ಮತ್ತು ಎಕ್ಸೆಲ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಗಳು ಜೊತೆಯಾಗಿ ನಿರ್ಮಿಸುತ್ತಿದೆ. ಈ ಚಿತ್ರವು 2026ರಲ್ಲಿ ತೆರೆಗೆ ಬರಲಿದೆ.

‘ಮಿರ್ಜಾಪುರ್‍’ ಒಂದು ಕ್ರೈಂ ಥ್ರಿಲ್ಲರ್‍ ಸರಣಿಯಾಗಿದ್ದು, 2018ರಲ್ಲಿ ಅಮೇಜಾನ್‍ ಪ್ರೈಮ್‍ನಲ್ಲಿ ಮೊದಲು ಬಿಡುಗಡೆಯಾಗಿತ್ತು. ಪಂಕಜ್‍ ತ್ರಿಪಾಠಿ, ಅಲಿ ಫಜಲ್‍, ದಿವ್ಯೆಂದು, ಅಭಿಷೇಕ್ ‍ಬ್ಯಾನರ್ಜಿ ಮುಂತಾದವರು ಈ ಸರಣಿಯಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸರಣಿಯು ಅದೆಷ್ಟು ಜನಪ್ರಿಯವಾಗಿತ್ತು ಎಂದರೆ, 2020ರ ಅಕ್ಟೋಬರ್‍ನಲ್ಲಿ ಎರಡನೇ ಸೀಸನ್‍ ಪ್ರಸಾರವಾಗಿತ್ತು. ಇದೂ ಸಹ ಜನಪ್ರಿಯವಾಗಿ ಮೂರನೇ ಸೀಸನ್‍ ಈ ವರ್ಷದ ಜುಲೈ ತಿಂಗಳಲ್ಲಿ ಬಂದಿತ್ತು.

ಇದೀಗ ಈ ಸರಣಿಯನ್ನು ಸಿನಿಮಾ ಮಾಡುವುದಕ್ಕೆ ತಂಡ ನಿರ್ಮಿಸಿದೆ. ಅದರಂತೆ, ಇದೇ ಕಥೆಯನ್ನಿಟ್ಟುಕೊಂಡು ಒಂದು ಚಿತ್ರ ಮಾಡಲಾಗುತ್ತದೆ. ವೆಬ್‍ ಸರಣಿಯಲ್ಲಿ ಇರುವ ಪಾತ್ರಧಾರಿಗಳು ಮತ್ತು ಕಲಾವಿದರೇ ಇಲ್ಲೂ ಮುಂದುವರೆಯುತ್ತಾರೆ. ಈ ಸಂಬಂಧ ಅಮೇಜಾನ್‍ ಪ್ರೈಮ್‍ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹೊಸದೊಂದು ಟೀಸರ್‍ ಬಿಡುಗಡೆಯಾಗಿದೆ. ಅದರಲ್ಲಿ ಪಂಕಜ್‍ ತ್ರಿಪಾಠಿ, ಅಲಿ ಫಜಲ್‍, ದಿವ್ಯೆಂದು ಮತ್ತು ಅಭಿಷೇಕ್ ‍ಬ್ಯಾನರ್ಜಿ ಕಾಣಿಸಿಕೊಂಡಿದ್ದು, ‘ಮಿರ್ಜಾಪುರ್‍’ ಸಿನಿಮಾ ಆಗುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇದುವರೆಗೂ ‘ಮಿರ್ಜಾಪುರ್’ ಸರಣಿಯನ್ನು ಟಿವಿ ಮತ್ತು ಮೊಬೈಲ್‍ನಲ್ಲಿ ನೋಡಿದ್ದು ಸಾಕು, ಇನ್ನು ಚಿತ್ರಮಂದಿರಗಳಲ್ಲಿ ಸಿನಿಮಾ ಆಗಿ ನೋಡಿ ಎಂದು ಕರೆ ನೀಡಿದ್ದಾರೆ.

‘ಮಿರ್ಜಾಪುರ್‍’ ವೆಬ್‍ ಸರಣಿಯನ್ನು ನಿರ್ದೇಶನ ಮಾಡಿದ್ದ ಗುರ್ಮೀಸ್ ಸಿಂಗ್‍ ಅವರೇ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಘೋಷಣೆಯಾಗಿದ್ದು, 2025ರಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಆ ನಂತರ 2026ರಲ್ಲಿ ಚಿತ್ರ ಜಗತ್ತಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿ ಎಂಟು ವಾರಗಳ ನಂತರ ಅಮೇಜಾನ್‍ ಪ್ರೈಂನಲ್ಲಿ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

6 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

10 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

10 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

10 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

11 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

11 hours ago