ಮನರಂಜನೆ

ಸಿನಿಮಾ ಆಗುತ್ತಿದೆ ಪಂಕಜ್‍ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್‍’; 2026ರಲ್ಲಿ ಬಿಡುಗಡೆ

ಅಮೇಜಾನ್‍ ಪ್ರೈಮ್‍ನಲ್ಲಿರುವ ಜನಪ್ರಿಯ ವೆಬ್‍ ಸರಣಿಗಳ ಪೈಕಿ ಪಂಕಜ್‍ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್’ ಸಹ ಒಂದು. ಈಗ ಈ ವೆಬ್‍ಸರಣಿಯು ಸಿನಿಮಾ ಆಗಿ ರೂಪುಗೊಳ್ಳುತ್ತಿದ್ದು, ಇದನ್ನು ಅಮೇಜಾನ್‍ MGM ಸ್ಟುಡಿಯೋಸ್‍ ಮತ್ತು ಎಕ್ಸೆಲ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಗಳು ಜೊತೆಯಾಗಿ ನಿರ್ಮಿಸುತ್ತಿದೆ. ಈ ಚಿತ್ರವು 2026ರಲ್ಲಿ ತೆರೆಗೆ ಬರಲಿದೆ.

‘ಮಿರ್ಜಾಪುರ್‍’ ಒಂದು ಕ್ರೈಂ ಥ್ರಿಲ್ಲರ್‍ ಸರಣಿಯಾಗಿದ್ದು, 2018ರಲ್ಲಿ ಅಮೇಜಾನ್‍ ಪ್ರೈಮ್‍ನಲ್ಲಿ ಮೊದಲು ಬಿಡುಗಡೆಯಾಗಿತ್ತು. ಪಂಕಜ್‍ ತ್ರಿಪಾಠಿ, ಅಲಿ ಫಜಲ್‍, ದಿವ್ಯೆಂದು, ಅಭಿಷೇಕ್ ‍ಬ್ಯಾನರ್ಜಿ ಮುಂತಾದವರು ಈ ಸರಣಿಯಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸರಣಿಯು ಅದೆಷ್ಟು ಜನಪ್ರಿಯವಾಗಿತ್ತು ಎಂದರೆ, 2020ರ ಅಕ್ಟೋಬರ್‍ನಲ್ಲಿ ಎರಡನೇ ಸೀಸನ್‍ ಪ್ರಸಾರವಾಗಿತ್ತು. ಇದೂ ಸಹ ಜನಪ್ರಿಯವಾಗಿ ಮೂರನೇ ಸೀಸನ್‍ ಈ ವರ್ಷದ ಜುಲೈ ತಿಂಗಳಲ್ಲಿ ಬಂದಿತ್ತು.

ಇದೀಗ ಈ ಸರಣಿಯನ್ನು ಸಿನಿಮಾ ಮಾಡುವುದಕ್ಕೆ ತಂಡ ನಿರ್ಮಿಸಿದೆ. ಅದರಂತೆ, ಇದೇ ಕಥೆಯನ್ನಿಟ್ಟುಕೊಂಡು ಒಂದು ಚಿತ್ರ ಮಾಡಲಾಗುತ್ತದೆ. ವೆಬ್‍ ಸರಣಿಯಲ್ಲಿ ಇರುವ ಪಾತ್ರಧಾರಿಗಳು ಮತ್ತು ಕಲಾವಿದರೇ ಇಲ್ಲೂ ಮುಂದುವರೆಯುತ್ತಾರೆ. ಈ ಸಂಬಂಧ ಅಮೇಜಾನ್‍ ಪ್ರೈಮ್‍ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹೊಸದೊಂದು ಟೀಸರ್‍ ಬಿಡುಗಡೆಯಾಗಿದೆ. ಅದರಲ್ಲಿ ಪಂಕಜ್‍ ತ್ರಿಪಾಠಿ, ಅಲಿ ಫಜಲ್‍, ದಿವ್ಯೆಂದು ಮತ್ತು ಅಭಿಷೇಕ್ ‍ಬ್ಯಾನರ್ಜಿ ಕಾಣಿಸಿಕೊಂಡಿದ್ದು, ‘ಮಿರ್ಜಾಪುರ್‍’ ಸಿನಿಮಾ ಆಗುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇದುವರೆಗೂ ‘ಮಿರ್ಜಾಪುರ್’ ಸರಣಿಯನ್ನು ಟಿವಿ ಮತ್ತು ಮೊಬೈಲ್‍ನಲ್ಲಿ ನೋಡಿದ್ದು ಸಾಕು, ಇನ್ನು ಚಿತ್ರಮಂದಿರಗಳಲ್ಲಿ ಸಿನಿಮಾ ಆಗಿ ನೋಡಿ ಎಂದು ಕರೆ ನೀಡಿದ್ದಾರೆ.

‘ಮಿರ್ಜಾಪುರ್‍’ ವೆಬ್‍ ಸರಣಿಯನ್ನು ನಿರ್ದೇಶನ ಮಾಡಿದ್ದ ಗುರ್ಮೀಸ್ ಸಿಂಗ್‍ ಅವರೇ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಘೋಷಣೆಯಾಗಿದ್ದು, 2025ರಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಆ ನಂತರ 2026ರಲ್ಲಿ ಚಿತ್ರ ಜಗತ್ತಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿ ಎಂಟು ವಾರಗಳ ನಂತರ ಅಮೇಜಾನ್‍ ಪ್ರೈಂನಲ್ಲಿ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago