ಅಮೇಜಾನ್ ಪ್ರೈಮ್ನಲ್ಲಿರುವ ಜನಪ್ರಿಯ ವೆಬ್ ಸರಣಿಗಳ ಪೈಕಿ ಪಂಕಜ್ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್’ ಸಹ ಒಂದು. ಈಗ ಈ ವೆಬ್ಸರಣಿಯು ಸಿನಿಮಾ ಆಗಿ ರೂಪುಗೊಳ್ಳುತ್ತಿದ್ದು, ಇದನ್ನು ಅಮೇಜಾನ್ MGM ಸ್ಟುಡಿಯೋಸ್ ಮತ್ತು ಎಕ್ಸೆಲ್ ಎಂಟರ್ಟೈನ್ಮೆಂಟ್ ಸಂಸ್ಥೆಗಳು ಜೊತೆಯಾಗಿ ನಿರ್ಮಿಸುತ್ತಿದೆ. ಈ ಚಿತ್ರವು 2026ರಲ್ಲಿ ತೆರೆಗೆ ಬರಲಿದೆ.
‘ಮಿರ್ಜಾಪುರ್’ ಒಂದು ಕ್ರೈಂ ಥ್ರಿಲ್ಲರ್ ಸರಣಿಯಾಗಿದ್ದು, 2018ರಲ್ಲಿ ಅಮೇಜಾನ್ ಪ್ರೈಮ್ನಲ್ಲಿ ಮೊದಲು ಬಿಡುಗಡೆಯಾಗಿತ್ತು. ಪಂಕಜ್ ತ್ರಿಪಾಠಿ, ಅಲಿ ಫಜಲ್, ದಿವ್ಯೆಂದು, ಅಭಿಷೇಕ್ ಬ್ಯಾನರ್ಜಿ ಮುಂತಾದವರು ಈ ಸರಣಿಯಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸರಣಿಯು ಅದೆಷ್ಟು ಜನಪ್ರಿಯವಾಗಿತ್ತು ಎಂದರೆ, 2020ರ ಅಕ್ಟೋಬರ್ನಲ್ಲಿ ಎರಡನೇ ಸೀಸನ್ ಪ್ರಸಾರವಾಗಿತ್ತು. ಇದೂ ಸಹ ಜನಪ್ರಿಯವಾಗಿ ಮೂರನೇ ಸೀಸನ್ ಈ ವರ್ಷದ ಜುಲೈ ತಿಂಗಳಲ್ಲಿ ಬಂದಿತ್ತು.
ಇದೀಗ ಈ ಸರಣಿಯನ್ನು ಸಿನಿಮಾ ಮಾಡುವುದಕ್ಕೆ ತಂಡ ನಿರ್ಮಿಸಿದೆ. ಅದರಂತೆ, ಇದೇ ಕಥೆಯನ್ನಿಟ್ಟುಕೊಂಡು ಒಂದು ಚಿತ್ರ ಮಾಡಲಾಗುತ್ತದೆ. ವೆಬ್ ಸರಣಿಯಲ್ಲಿ ಇರುವ ಪಾತ್ರಧಾರಿಗಳು ಮತ್ತು ಕಲಾವಿದರೇ ಇಲ್ಲೂ ಮುಂದುವರೆಯುತ್ತಾರೆ. ಈ ಸಂಬಂಧ ಅಮೇಜಾನ್ ಪ್ರೈಮ್ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹೊಸದೊಂದು ಟೀಸರ್ ಬಿಡುಗಡೆಯಾಗಿದೆ. ಅದರಲ್ಲಿ ಪಂಕಜ್ ತ್ರಿಪಾಠಿ, ಅಲಿ ಫಜಲ್, ದಿವ್ಯೆಂದು ಮತ್ತು ಅಭಿಷೇಕ್ ಬ್ಯಾನರ್ಜಿ ಕಾಣಿಸಿಕೊಂಡಿದ್ದು, ‘ಮಿರ್ಜಾಪುರ್’ ಸಿನಿಮಾ ಆಗುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇದುವರೆಗೂ ‘ಮಿರ್ಜಾಪುರ್’ ಸರಣಿಯನ್ನು ಟಿವಿ ಮತ್ತು ಮೊಬೈಲ್ನಲ್ಲಿ ನೋಡಿದ್ದು ಸಾಕು, ಇನ್ನು ಚಿತ್ರಮಂದಿರಗಳಲ್ಲಿ ಸಿನಿಮಾ ಆಗಿ ನೋಡಿ ಎಂದು ಕರೆ ನೀಡಿದ್ದಾರೆ.
‘ಮಿರ್ಜಾಪುರ್’ ವೆಬ್ ಸರಣಿಯನ್ನು ನಿರ್ದೇಶನ ಮಾಡಿದ್ದ ಗುರ್ಮೀಸ್ ಸಿಂಗ್ ಅವರೇ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಘೋಷಣೆಯಾಗಿದ್ದು, 2025ರಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಆ ನಂತರ 2026ರಲ್ಲಿ ಚಿತ್ರ ಜಗತ್ತಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿ ಎಂಟು ವಾರಗಳ ನಂತರ ಅಮೇಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ.
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…