ಮನರಂಜನೆ

ನವೆಂಬರ್.14ರಂದು ತೆರೆಮೇಲೆ ಫ್ಯಾಂಟಸಿ ‘ಗತವೈಭವ’

ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳನ್ನೇ ಹೆಚ್ಚಾಗಿ ಮಾಡಿಕೊಂಡು ಬಂದಿರುವ ನಿರ್ದೇಶಕ ಸಿಂಪಲ್ ಸುನಿ ಅವರು, ಇದೇ ಮೊದಲ ಬಾರಿಗೆ ಫ್ಯಾಂಟಸಿ ಡ್ರಾಮಾ ಚಿತ್ರಕ್ಕೆ ಕೈ ಹಾಕಿದ್ದಾರೆ.

ಈ ಚಿತ್ರದ ಹೆಸರು ‘ಗತವೈಭವ’. ಯುವ ಪ್ರತಿಭೆ ದುಷ್ಯಂತ್ ನಾಯಕ ನಟನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಅವರೇ ಗತವೈಭವ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ಟೀಸರ್ ಅತಿ ಹೆಚ್ಚು ವೀಕ್ಷಕರನ್ನು ಸೆಳೆಯುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಟೀಸರ್ ಲಾಂಚ್ ಬಳಿಕ ಮಾತನಾಡಿದ ಸಿಂಪಲ್ ಸುನಿ ಅವರು, ಗತವೈಭವ ತುಂಬಾ ಸೀರಿಯಸ್ ಆಗಿ ತೆಗೆದುಕೊಂಡ ಪ್ರಾಜೆಕ್ಟ್. ನನ್ನ ಬ್ಯಾನರ್ ನಡಿ ಮಾಡಬೇಕು ಎಂದುಕೊಂಡ ಸಿನಿಮಾ. ದುಷ್ಯಂತ್ ಈ ಪ್ರಾಜೆಕ್ಟ್ ಮಾಡ ಬೇಕು ಎಂಬ ಆಶಯದಲ್ಲೇ ಈ ಸಿನಿಮಾ ಆಗಿದೆ. ಈ ಚಿತ್ರ ರಿಲೀಸ್ ಆದ ಮೇಲೆ ಹೆಚ್ಚು ಪ್ರಚಾರ ಪಡೆಯುತ್ತದೆ. ನಾನು ಕೂಡ ಪ್ರೇಕ್ಷಕರ ರೀತಿ ಈ ಸಿನಿಮಾಗಾಗಿ ಕಾಯುತ್ತಿದ್ದೇನೆ. ಚಿತ್ರದಲ್ಲಿ ಪ್ರತಿ ಶಾರ್ಟ್ ತುಂಬಾ ಚೆನ್ನಾಗಿ ಮೂಡಿಬಂದಿದೆ. ದುಷ್ಯಂತ್ ನ್ಯಾಚುರಲ್ ಆರ್ಟಿಸ್ಟ್. ಆಶಿಕಾ ರಂಗನಾಥ್ ಕುಟುಂಬದ ಸದಸ್ಯರಂತೆ ಆಗಿದ್ದಾರೆ. ಈ ಸಿನಿಮಾದಲ್ಲಿ ಮನರಂಜನೆ, ಎಮೋಷನ್ ಎಲ್ಲವೂ ಇದೆ ಎಂದು ಹೇಳಿದರು.

ಚಿತ್ರದ ನಾಯಕ ನಟ ದುಷ್ಯಂತ್ ಮಾತನಾಡಿ, ನೂರು ದಿನಗಳಿಗೂ ಹೆಚ್ಚು ಕಾಲ ಶೂಟಿಂಗ್ ಮಾಡಿದ್ದೇವೆ. ಪೋರ್ಚುಗಲ್‌ನಲ್ಲಿ ಚಿತ್ರೀಕರಣ ಆಗಿದೆ. ನಿರೀಕ್ಷೆಗೂ ಮೀರಿ ಅದ್ಭುತವಾಗಿ ಚಿತ್ರ ಮೂಡಿಬಂದಿದೆ. ಸುನಿ ಸರ್ ಅವರ ಹತ್ತು ಸಿನಿಮಾಗಳಿಗಿಂತ ಇದು ಬೆಸ್ಟ್ ಸಿನಿಮಾವಾಗಲಿದೆ ಎಂದು ಸಿನಿಮಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು.

ಇನ್ನು ನಟಿ ಆಶಿಕಾ ರಂಗನಾಥ್ ಮಾತನಾಡಿ, ‘ಗತವೈಭವ’ ತುಂಬಾ ಸ್ಪೆಷಲ್ ಸಿನಿಮಾ. ಈ ರೀತಿಯ ಪಾತ್ರ ಸಿಗಲು ಕಲಾವಿದರು ಅದೃಷ್ಟ ಮಾಡಿರಬೇಕು. ನನಗೆ ಈ ಸಿನಿಮಾದಲ್ಲಿ ನಾಲ್ಕು ತರಹದ ಪಾತ್ರ ಇದೆ ಎಂದು ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದರು.

‘ಗತವೈಭವ’ ಸಿನಿಮಾವನ್ನು ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ಸೈಂಟಿಫಿಕ್ ಥ್ರಿಲ್ಲರ್ ಮಿಕ್ಸ್ ಮಾಡಿ ಮಾಡಲಾಗಿದೆ. ಹೀಗಾಗಿ ಇದು ಸಿಂಪಲ್ ಸುನಿ ಕರಿಯರ್‌ನ ವಿಭಿನ್ನ ಸಿನಿಮಾವಾಗಿದೆ. ಇನ್ನು ವಿಶೇಷವೆಂದರೆ ‘ಗತವೈಭವ’ ಚಿತ್ರಕ್ಕಾಗಿ ವಿಶೇಷವಾಗಿ ರೂಪಿಸಿರುವ ಶಿಪ್ ಸಾಂಗ್‌ಅನ್ನು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದರು. ಹಾಡಿನ ಬಿಡುಗಡೆ ಜೊತೆಗೆ ಹಾಡಿಗೆ ವೇದಿಕೆ ಮೇಲೆಯೇ ಡ್ಯಾನ್ಸ್ ಮಾಡಿ ನೆರೆದಿದ್ದವರನ್ನು ರಂಜಿಸಿದರು.

ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ಜೂಡಾ ಸ್ಯಾಂಡಿ ಸಂಗೀತ ಈ ಚಿತ್ರಕ್ಕಿದೆ. ಸಿನಿಮಾದ ಟೀಸರ್, ಹಾಡುಗಳಾದ ವರ್ಣಮಾಲೆ ಹಾಗೂ ಶಿಪ್ ಹಾಡುಗಳು ಈಗಾಗಲೇ ಬಿಡುಗಡೆ ಆಗಿ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಇದೇ ತಿಂಗಳ ೧೪ರಂದು ಗತವೈಭವ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರಮಂದಿರಗಳಲ್ಲಿ ದೂಳೆಬ್ಬಿಸಲಿದೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago