ಮನರಂಜನೆ

ಪ್ರವಾಸದಲ್ಲಿ ತಂದೆ-ಮಗನ ಭಾಂದವ್ಯ; ‘ಫಾದರ್ಸ್ ಡೇ’ ಬಿಡುಗಡೆಗೆ ಸಿದ್ಧ

ಈ ಹಿಂದೆ ‘ಆಚಾರ್ ಆ್ಯಂಡ್‍ ಕೋ’, ‘ಅನಾಮಧ್ಯೇಯ ಅಶೋಕ್‍ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್‍ ಕೌಶಿಕ್‍, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ತಂದೆ-ಮಗನ ಭಾಂದವ್ಯ ಸಾರುವ ‘ಫಾದರ್ಸ್ ಡೇ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ.

‘ಫಾದರ್ಸ್ ಡೇ’ ಚಿತ್ರವನ್ನು Eleven Elements ಮತ್ತು Rectangle Studios ಸಂಸ್ಥೆಗಳಡಿ ರಾಜಾರಾಮ್ ರಾಜೇಂದ್ರನ್ ಮತ್ತು ಯೋಗೇಶ್‍ ಶ್ರೀನಿವಾಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ರಾಜಾರಾಮ್ ರಾಜೇಂದ್ರನ್ ನಿರ್ದೇಶಿಸಿದ್ದು, ಹರ್ಷಿಲ್ ಕೌಶಿಕ್ ಹಾಗೂ ‘ಶ್ರೀರಸ್ತು ಶುಭಮಸ್ತು’ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯರಾಗಿರುವ ಅಜಿತ್ ಹಂಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ಗಾಯಕ ALL OK ಹಾಗೂ ಸಾಮ್ರಾಗ್ನಿ ರಾಜನ್ ಸಹ ಈ ಚಿತ್ರದಲ್ಲಿದ್ದಾರೆ.

ಇದೊಂದು ಪ್ರವಾಸ ಕಥನದ ಚಿತ್ರವಾಗಿದ್ದು, ಕನ್ನಡದ ಮೊದಲ ಬೈಕರ್ ಚಿತ್ರ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರದ ಕಥೆ ಇಬ್ಬರು ಬೈಕರ್‍ಗಳ ಸುತ್ತ ಸಾಗುತ್ತದೆ. ಇಬ್ಬರು ಸಹ ಪಯಣಿಗರಾಗಿದ್ದರೂ, ತಾವಿಬ್ಬರು ತಂದೆ – ಮಗ ಎಂದು ಕೊನೆಯವರೆಗೂ ತಿಳಿಯುವುದಿಲ್ಲ‌. ಅಂತಹ ಕೌತುಕ ಚಿತ್ರಕಥೆ ಹೊಂದಿರುವ ‘ಫಾದರ್ಸ್ ಡೇ’ ಚಿತ್ರವು ತಂದೆ – ಮಗನ ಬಾಂಧವ್ಯದ ಸುತ್ತ ಸಾಗುತ್ತದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಟೀಸರ್ ಬಿಡುಗಡೆಯಾಗಿದೆ. ಜ್ಯೋತ್ಸ್ನಾ ಪಣಿಕರ್ ಸಂಕಲನ ಹಾಗೂ ಜೋ ಪಣಿಕರ್‍ ಹಾಗೂ ALL OK ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

6 mins ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

16 mins ago

ಫೆ.1ರಂದು ನಿಮಿಷಾಂಬದಲ್ಲಿ ಮಾಘ ಶುದ್ಧ ಪೌರ್ಣಮಿ : ನದಿಯ ತೀರದಲ್ಲಿ ಸೂಕ್ತ ಭದ್ರತೆಗೆ ಶಾಸಕರ ಸೂಚನೆ

ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…

25 mins ago

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

1 hour ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

2 hours ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

2 hours ago