ಮನರಂಜನೆ

ಪ್ರವಾಸದಲ್ಲಿ ತಂದೆ-ಮಗನ ಭಾಂದವ್ಯ; ‘ಫಾದರ್ಸ್ ಡೇ’ ಬಿಡುಗಡೆಗೆ ಸಿದ್ಧ

ಈ ಹಿಂದೆ ‘ಆಚಾರ್ ಆ್ಯಂಡ್‍ ಕೋ’, ‘ಅನಾಮಧ್ಯೇಯ ಅಶೋಕ್‍ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್‍ ಕೌಶಿಕ್‍, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ತಂದೆ-ಮಗನ ಭಾಂದವ್ಯ ಸಾರುವ ‘ಫಾದರ್ಸ್ ಡೇ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ.

‘ಫಾದರ್ಸ್ ಡೇ’ ಚಿತ್ರವನ್ನು Eleven Elements ಮತ್ತು Rectangle Studios ಸಂಸ್ಥೆಗಳಡಿ ರಾಜಾರಾಮ್ ರಾಜೇಂದ್ರನ್ ಮತ್ತು ಯೋಗೇಶ್‍ ಶ್ರೀನಿವಾಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ರಾಜಾರಾಮ್ ರಾಜೇಂದ್ರನ್ ನಿರ್ದೇಶಿಸಿದ್ದು, ಹರ್ಷಿಲ್ ಕೌಶಿಕ್ ಹಾಗೂ ‘ಶ್ರೀರಸ್ತು ಶುಭಮಸ್ತು’ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯರಾಗಿರುವ ಅಜಿತ್ ಹಂಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ಗಾಯಕ ALL OK ಹಾಗೂ ಸಾಮ್ರಾಗ್ನಿ ರಾಜನ್ ಸಹ ಈ ಚಿತ್ರದಲ್ಲಿದ್ದಾರೆ.

ಇದೊಂದು ಪ್ರವಾಸ ಕಥನದ ಚಿತ್ರವಾಗಿದ್ದು, ಕನ್ನಡದ ಮೊದಲ ಬೈಕರ್ ಚಿತ್ರ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರದ ಕಥೆ ಇಬ್ಬರು ಬೈಕರ್‍ಗಳ ಸುತ್ತ ಸಾಗುತ್ತದೆ. ಇಬ್ಬರು ಸಹ ಪಯಣಿಗರಾಗಿದ್ದರೂ, ತಾವಿಬ್ಬರು ತಂದೆ – ಮಗ ಎಂದು ಕೊನೆಯವರೆಗೂ ತಿಳಿಯುವುದಿಲ್ಲ‌. ಅಂತಹ ಕೌತುಕ ಚಿತ್ರಕಥೆ ಹೊಂದಿರುವ ‘ಫಾದರ್ಸ್ ಡೇ’ ಚಿತ್ರವು ತಂದೆ – ಮಗನ ಬಾಂಧವ್ಯದ ಸುತ್ತ ಸಾಗುತ್ತದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಟೀಸರ್ ಬಿಡುಗಡೆಯಾಗಿದೆ. ಜ್ಯೋತ್ಸ್ನಾ ಪಣಿಕರ್ ಸಂಕಲನ ಹಾಗೂ ಜೋ ಪಣಿಕರ್‍ ಹಾಗೂ ALL OK ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

11 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

48 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

1 hour ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

1 hour ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

2 hours ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

2 hours ago