ಮನರಂಜನೆ

ಪ್ರವಾಸದಲ್ಲಿ ತಂದೆ-ಮಗನ ಭಾಂದವ್ಯ; ‘ಫಾದರ್ಸ್ ಡೇ’ ಬಿಡುಗಡೆಗೆ ಸಿದ್ಧ

ಈ ಹಿಂದೆ ‘ಆಚಾರ್ ಆ್ಯಂಡ್‍ ಕೋ’, ‘ಅನಾಮಧ್ಯೇಯ ಅಶೋಕ್‍ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್‍ ಕೌಶಿಕ್‍, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ತಂದೆ-ಮಗನ ಭಾಂದವ್ಯ ಸಾರುವ ‘ಫಾದರ್ಸ್ ಡೇ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ.

‘ಫಾದರ್ಸ್ ಡೇ’ ಚಿತ್ರವನ್ನು Eleven Elements ಮತ್ತು Rectangle Studios ಸಂಸ್ಥೆಗಳಡಿ ರಾಜಾರಾಮ್ ರಾಜೇಂದ್ರನ್ ಮತ್ತು ಯೋಗೇಶ್‍ ಶ್ರೀನಿವಾಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ರಾಜಾರಾಮ್ ರಾಜೇಂದ್ರನ್ ನಿರ್ದೇಶಿಸಿದ್ದು, ಹರ್ಷಿಲ್ ಕೌಶಿಕ್ ಹಾಗೂ ‘ಶ್ರೀರಸ್ತು ಶುಭಮಸ್ತು’ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯರಾಗಿರುವ ಅಜಿತ್ ಹಂಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ಗಾಯಕ ALL OK ಹಾಗೂ ಸಾಮ್ರಾಗ್ನಿ ರಾಜನ್ ಸಹ ಈ ಚಿತ್ರದಲ್ಲಿದ್ದಾರೆ.

ಇದೊಂದು ಪ್ರವಾಸ ಕಥನದ ಚಿತ್ರವಾಗಿದ್ದು, ಕನ್ನಡದ ಮೊದಲ ಬೈಕರ್ ಚಿತ್ರ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರದ ಕಥೆ ಇಬ್ಬರು ಬೈಕರ್‍ಗಳ ಸುತ್ತ ಸಾಗುತ್ತದೆ. ಇಬ್ಬರು ಸಹ ಪಯಣಿಗರಾಗಿದ್ದರೂ, ತಾವಿಬ್ಬರು ತಂದೆ – ಮಗ ಎಂದು ಕೊನೆಯವರೆಗೂ ತಿಳಿಯುವುದಿಲ್ಲ‌. ಅಂತಹ ಕೌತುಕ ಚಿತ್ರಕಥೆ ಹೊಂದಿರುವ ‘ಫಾದರ್ಸ್ ಡೇ’ ಚಿತ್ರವು ತಂದೆ – ಮಗನ ಬಾಂಧವ್ಯದ ಸುತ್ತ ಸಾಗುತ್ತದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಟೀಸರ್ ಬಿಡುಗಡೆಯಾಗಿದೆ. ಜ್ಯೋತ್ಸ್ನಾ ಪಣಿಕರ್ ಸಂಕಲನ ಹಾಗೂ ಜೋ ಪಣಿಕರ್‍ ಹಾಗೂ ALL OK ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago