ಮನರಂಜನೆ

ಪ್ರವಾಸದಲ್ಲಿ ತಂದೆ-ಮಗನ ಭಾಂದವ್ಯ; ‘ಫಾದರ್ಸ್ ಡೇ’ ಬಿಡುಗಡೆಗೆ ಸಿದ್ಧ

ಈ ಹಿಂದೆ ‘ಆಚಾರ್ ಆ್ಯಂಡ್‍ ಕೋ’, ‘ಅನಾಮಧ್ಯೇಯ ಅಶೋಕ್‍ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್‍ ಕೌಶಿಕ್‍, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ತಂದೆ-ಮಗನ ಭಾಂದವ್ಯ ಸಾರುವ ‘ಫಾದರ್ಸ್ ಡೇ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ.

‘ಫಾದರ್ಸ್ ಡೇ’ ಚಿತ್ರವನ್ನು Eleven Elements ಮತ್ತು Rectangle Studios ಸಂಸ್ಥೆಗಳಡಿ ರಾಜಾರಾಮ್ ರಾಜೇಂದ್ರನ್ ಮತ್ತು ಯೋಗೇಶ್‍ ಶ್ರೀನಿವಾಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ರಾಜಾರಾಮ್ ರಾಜೇಂದ್ರನ್ ನಿರ್ದೇಶಿಸಿದ್ದು, ಹರ್ಷಿಲ್ ಕೌಶಿಕ್ ಹಾಗೂ ‘ಶ್ರೀರಸ್ತು ಶುಭಮಸ್ತು’ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯರಾಗಿರುವ ಅಜಿತ್ ಹಂಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ಗಾಯಕ ALL OK ಹಾಗೂ ಸಾಮ್ರಾಗ್ನಿ ರಾಜನ್ ಸಹ ಈ ಚಿತ್ರದಲ್ಲಿದ್ದಾರೆ.

ಇದೊಂದು ಪ್ರವಾಸ ಕಥನದ ಚಿತ್ರವಾಗಿದ್ದು, ಕನ್ನಡದ ಮೊದಲ ಬೈಕರ್ ಚಿತ್ರ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರದ ಕಥೆ ಇಬ್ಬರು ಬೈಕರ್‍ಗಳ ಸುತ್ತ ಸಾಗುತ್ತದೆ. ಇಬ್ಬರು ಸಹ ಪಯಣಿಗರಾಗಿದ್ದರೂ, ತಾವಿಬ್ಬರು ತಂದೆ – ಮಗ ಎಂದು ಕೊನೆಯವರೆಗೂ ತಿಳಿಯುವುದಿಲ್ಲ‌. ಅಂತಹ ಕೌತುಕ ಚಿತ್ರಕಥೆ ಹೊಂದಿರುವ ‘ಫಾದರ್ಸ್ ಡೇ’ ಚಿತ್ರವು ತಂದೆ – ಮಗನ ಬಾಂಧವ್ಯದ ಸುತ್ತ ಸಾಗುತ್ತದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಟೀಸರ್ ಬಿಡುಗಡೆಯಾಗಿದೆ. ಜ್ಯೋತ್ಸ್ನಾ ಪಣಿಕರ್ ಸಂಕಲನ ಹಾಗೂ ಜೋ ಪಣಿಕರ್‍ ಹಾಗೂ ALL OK ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

4 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

5 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

7 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

7 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

12 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

14 hours ago