ಮನರಂಜನೆ

ಚಿತ್ರವಾಯ್ತು ‘ಮಂಕುತಿಮ್ಮನ ಕಗ್ಗ’; ಡಿವಿಜಿ ಗುರುಗಳ ಪಾತ್ರದಲ್ಲಿ ರಾಮಕೃಷ್ಣ

ಡಾ.ಡಿ.ವಿ. ಗುಂಡಪ್ಪ ಅತ್ಯಂತ ಜನಪ್ರಿಯ ಕೃತಿ ‘ಮಂಕುತಿಮ್ಮನ ಕಗ್ಗ’. ಡಿವಿಜಿ ಮತ್ತು ಕಗ್ಗ ಎರಡನ್ನೂ ಇಟ್ಟುಕೊಂಡು ‘ಮಂಕುತಿಮ್ಮನ ಕಗ್ಗ’ ಎಂಬ ಚಿತ್ರ ಸದ್ದಿಲ್ಲದೆ ತಯಾರಾಗಿದೆ.

ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ. ರವಿ), ಡಿ.ವಿ.ಜಿ ಅವರ ‘ಮಂಕುತಿಮ್ಮನ ಕಗ್ಗ’ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್.ಎ ಶಿವಕುಮಾರ್ ಅವರು ನಿರ್ಮಿಸಿರುವ ಈ ಚಿತ್ರದ ‘ಸ್ವಾಮಿದೇವನೇ …’ ಎಂಬ ಹಾಡು ವರಮಹಾಲಕ್ಷ್ಮೀ ಹಬ್ಬದಂದು ಎ2 ಚಾನಲ್‍ನಲ್ಲಿ ಬಿಡುಡೆಯಾಗಿದೆ.

ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ಈ ಗೀತೆಯನ್ನು‌ ‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ‌ಎ.ಟಿ.ರವೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಸದ್ದಿಲ್ಲದೆ ಮಧುಗಿರಿ ಸುತ್ತಮುತ್ತ ತಯಾರಾಗಿದ್ದು, ಸೆನ್ಸಾರ್‍ ಸಹ ಆಗಿದೆ.

‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬರೀ ಕಗ್ಗ ಹುಟ್ಟಿದ ರೀತಿ ಅಥವಾ ಅದು ಸಮಾಜದ ಮೇಲಾದ ಪರಿಣಾಮದ ಕುರಿತಾಗಿ ಅಷ್ಟೇ ಅಲ್ಲ, ಚಿತ್ರದಲ್ಲಿ‌‌ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಡಿ.ವಿ.ಜಿ ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಈ ಕಥೆಯನ್ನು ವಿಸ್ತರಿಸುವುದರ ಜೊತೆಗೆ, ‌ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ ನಿರ್ದೇಶಕ ರಾಜ ರವಿಶಂಕರ್. ಸಿ. ನಾರಾಯಣ್ ಛಾಯಾಗ್ರಹಣ ಹಾಗೂ ಆರ್ ಡಿ ರವಿ ಸಂಕಲನ ಈ ಚಿತ್ರಕ್ಕಿದೆ‌.

ಭೂಮಿಕಾ

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

4 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

4 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

4 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

4 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

4 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

5 hours ago