ಡಾ.ಡಿ.ವಿ. ಗುಂಡಪ್ಪ ಅತ್ಯಂತ ಜನಪ್ರಿಯ ಕೃತಿ ‘ಮಂಕುತಿಮ್ಮನ ಕಗ್ಗ’. ಡಿವಿಜಿ ಮತ್ತು ಕಗ್ಗ ಎರಡನ್ನೂ ಇಟ್ಟುಕೊಂಡು ‘ಮಂಕುತಿಮ್ಮನ ಕಗ್ಗ’ ಎಂಬ ಚಿತ್ರ ಸದ್ದಿಲ್ಲದೆ ತಯಾರಾಗಿದೆ.
ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ. ರವಿ), ಡಿ.ವಿ.ಜಿ ಅವರ ‘ಮಂಕುತಿಮ್ಮನ ಕಗ್ಗ’ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್.ಎ ಶಿವಕುಮಾರ್ ಅವರು ನಿರ್ಮಿಸಿರುವ ಈ ಚಿತ್ರದ ‘ಸ್ವಾಮಿದೇವನೇ …’ ಎಂಬ ಹಾಡು ವರಮಹಾಲಕ್ಷ್ಮೀ ಹಬ್ಬದಂದು ಎ2 ಚಾನಲ್ನಲ್ಲಿ ಬಿಡುಡೆಯಾಗಿದೆ.
ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ಈ ಗೀತೆಯನ್ನು ‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಎ.ಟಿ.ರವೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಸದ್ದಿಲ್ಲದೆ ಮಧುಗಿರಿ ಸುತ್ತಮುತ್ತ ತಯಾರಾಗಿದ್ದು, ಸೆನ್ಸಾರ್ ಸಹ ಆಗಿದೆ.
‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬರೀ ಕಗ್ಗ ಹುಟ್ಟಿದ ರೀತಿ ಅಥವಾ ಅದು ಸಮಾಜದ ಮೇಲಾದ ಪರಿಣಾಮದ ಕುರಿತಾಗಿ ಅಷ್ಟೇ ಅಲ್ಲ, ಚಿತ್ರದಲ್ಲಿ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಡಿ.ವಿ.ಜಿ ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಈ ಕಥೆಯನ್ನು ವಿಸ್ತರಿಸುವುದರ ಜೊತೆಗೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ ನಿರ್ದೇಶಕ ರಾಜ ರವಿಶಂಕರ್. ಸಿ. ನಾರಾಯಣ್ ಛಾಯಾಗ್ರಹಣ ಹಾಗೂ ಆರ್ ಡಿ ರವಿ ಸಂಕಲನ ಈ ಚಿತ್ರಕ್ಕಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…