ಮನರಂಜನೆ

ಚಿತ್ರವಾಯ್ತು ‘ಮಂಕುತಿಮ್ಮನ ಕಗ್ಗ’; ಡಿವಿಜಿ ಗುರುಗಳ ಪಾತ್ರದಲ್ಲಿ ರಾಮಕೃಷ್ಣ

ಡಾ.ಡಿ.ವಿ. ಗುಂಡಪ್ಪ ಅತ್ಯಂತ ಜನಪ್ರಿಯ ಕೃತಿ ‘ಮಂಕುತಿಮ್ಮನ ಕಗ್ಗ’. ಡಿವಿಜಿ ಮತ್ತು ಕಗ್ಗ ಎರಡನ್ನೂ ಇಟ್ಟುಕೊಂಡು ‘ಮಂಕುತಿಮ್ಮನ ಕಗ್ಗ’ ಎಂಬ ಚಿತ್ರ ಸದ್ದಿಲ್ಲದೆ ತಯಾರಾಗಿದೆ.

ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ. ರವಿ), ಡಿ.ವಿ.ಜಿ ಅವರ ‘ಮಂಕುತಿಮ್ಮನ ಕಗ್ಗ’ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್.ಎ ಶಿವಕುಮಾರ್ ಅವರು ನಿರ್ಮಿಸಿರುವ ಈ ಚಿತ್ರದ ‘ಸ್ವಾಮಿದೇವನೇ …’ ಎಂಬ ಹಾಡು ವರಮಹಾಲಕ್ಷ್ಮೀ ಹಬ್ಬದಂದು ಎ2 ಚಾನಲ್‍ನಲ್ಲಿ ಬಿಡುಡೆಯಾಗಿದೆ.

ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ಈ ಗೀತೆಯನ್ನು‌ ‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ‌ಎ.ಟಿ.ರವೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಸದ್ದಿಲ್ಲದೆ ಮಧುಗಿರಿ ಸುತ್ತಮುತ್ತ ತಯಾರಾಗಿದ್ದು, ಸೆನ್ಸಾರ್‍ ಸಹ ಆಗಿದೆ.

‘ಮಂಕುತಿಮ್ಮನ ಕಗ್ಗ’ ಚಿತ್ರದಲ್ಲಿ ಬರೀ ಕಗ್ಗ ಹುಟ್ಟಿದ ರೀತಿ ಅಥವಾ ಅದು ಸಮಾಜದ ಮೇಲಾದ ಪರಿಣಾಮದ ಕುರಿತಾಗಿ ಅಷ್ಟೇ ಅಲ್ಲ, ಚಿತ್ರದಲ್ಲಿ‌‌ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಡಿ.ವಿ.ಜಿ ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಈ ಕಥೆಯನ್ನು ವಿಸ್ತರಿಸುವುದರ ಜೊತೆಗೆ, ‌ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ ನಿರ್ದೇಶಕ ರಾಜ ರವಿಶಂಕರ್. ಸಿ. ನಾರಾಯಣ್ ಛಾಯಾಗ್ರಹಣ ಹಾಗೂ ಆರ್ ಡಿ ರವಿ ಸಂಕಲನ ಈ ಚಿತ್ರಕ್ಕಿದೆ‌.

ಭೂಮಿಕಾ

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

2 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

3 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

3 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

9 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago