ಮನರಂಜನೆ

ಕೊನೆಗೂ ಮುಗಿಯಿತು ‘ಕರಾವಳಿ’ ಚಿತ್ರೀಕರಣ: ಸದ್ಯದಲ್ಲೇ ತೆರೆಗೆ

ಸುಮಾರು ಒಂದೂವರೆ ವರ್ಷಗಳ ಹಿಂದೆ ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರ ಪ್ರಾರಂಭವಾಗಿತ್ತು. ಆಗಾಗ ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆಯ ಸುದ್ದಿ ಬರುತ್ತಿದ್ದು ಬಿಟ್ಟರೆ, ಚಿತ್ರ ಮುಗಿದ ಸುದ್ದಿಯೇ ಇರಲಿಲ್ಲ. ಇದೀಗ ಚಿತ್ರತಂಡದವರು ಚಿತ್ರೀಕರಣ ಮುಗಿಸಿದ್ದು, ಬಿಡುಗಡೆ ಮಾಡುವುದಕ್ಕೆ ತಯಾರಿ ನಡೆಸಿದ್ದಾರೆ.

‘ಕರಾವಳಿ’ ಹೆಸರೇ ಹೇಳುವ ಹಾಗೆ ಅಲ್ಲಿನ ಸಂಸ್ಕೃತಿ, ಸೊಗಡಿನ ಬಗ್ಗೆ ಇರುವ ಸಿನಿಮಾ. ಚಿತ್ರವು ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆಯನ್ನು ಹೇಳುತ್ತದೆ. ಪಕ್ಕಾ ಗ್ರಾಮೀಣ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಹಿಂದೆ ‘ರಥಾವರ’ ಸಿನಿಮಾ ಮಾಡಿದ್ದ ಚಂದ್ರಶೇಖರ್ ಬಂಡಿಯಪ್ಪ, ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು. ವಿಕ್ರಮ್‍ ಮೋರ್ ಸಾಹಸ ನಿರ್ದೇಶನದಲ್ಲಿ ಒಂದಿಷ್ಟು ಸಾಹಸ ದೃಶ್ಯಗಳನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಅವತಾರವೆತ್ತಿದ್ದರು.

ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಪ್ರಜ್ವಲ್ ದೇವರಾಜ್, ‘ನಾನೆಂದು ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ಶ್ರಮ ಹಾಕಿದ್ದೀವಿ. ಅಷ್ಟೇ ಅಲ್ಲ, ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’ ಎಂದು ಹೇಳಿದರು.

ಇನ್ನು, ಚಿತ್ರದ ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಮಾವೀರ ಎನ್ನುವ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ರಾಜ್ ಬಿ ಶೆಟ್ಟಿ ಪಾತ್ರದ ಮೊದಲ ನೋಟ ಬಿಡುಗಡೆಯಾಗಿದೆ. ಮಿಕ್ಕಂತೆ ಮಿತ್ರ, ರಮೇಶ್ ಇಂದಿರ, ‘ಸಿದ್ಲಿಂಗು’ ಶ್ರೀಧರ್ ಹಾಗೂ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

‘ಕರಾವಳಿ’ ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸುವ ಜೊತೆಗೆ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ, ಅಭಿಮನ್ಯು ಸದಾನಂದನ್ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

1 hour ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

1 hour ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

1 hour ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

1 hour ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

1 hour ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

1 hour ago