ಮನರಂಜನೆ

ಬಾಲಿವುಡ್‌ ನಟ ಶರದ್ ಕಪೂರ್‌ ವಿರುದ್ಧ ಎಫ್‌ಐಆರ್‌: ಕಾರಣ ಇಷ್ಟೇ

ಬಾಲಿವುಡ್‌ ನಟ ಶರದ್‌ ಕಪೂರ್‌ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟನ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಮನೆಗೆ ಕರೆಸಿ ನನ್ನನ್ನು ಅಸಹ್ಯವಾಗಿ ನಡೆಸಿಕೊಂಡಿದ್ದಾರೆ ಎಂದು 32 ವರ್ಷದ ಸಂತ್ರಸ್ತ ಮಹಿಳೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಳು.

ಶರದ್‌ ಕಪೂರ್‌ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಈಕೆಯೊಂದಿಗೆ ಸಂವಹನ ನಡೆಸುತ್ತಿದ್ದರು ಎನ್ನಲಾಗಿದ್ದು, ತುಂಬಾ ಹತ್ತಿರವಾದ ನಂತರ ವಿಡಿಯೋ ಕರೆ ಮೂಲಕವು ಸಂಪರ್ಕದಲ್ಲಿರುತ್ತಿದ್ದರು ಎಂದು ಹೇಳಲಾಗುತ್ತಿದೆ.

ಮಹಿಳೆಯ ಪರಿಚಯ ಆದ ನಂತರ ತನ್ನ ಆಫೀಸ್‌ಗೆ ಬರಲು ಶರದ್‌ ಹೇಳಿದ್ದಾರೆ. ಆದರೆ ಅವರು ಕಳುಹಿಸಿದ ವಿಳಾಸಕ್ಕೆ ಹೋದ ನಂತರ ಗೊತ್ತಾಯಿತು ಅದು ಮನೆ ಅಂತ. ಮನೆಯಲ್ಲಿ ಶರತ್‌ ನನ್ನ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಬಲವಂತವಾಗಿ ಸ್ಪರ್ಶಿಸಿ ಕೋಣೆಗೆ ಕರೆದಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಘಟನೆಯ ನಂತರ ಶರದ್‌ ನನಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಶರದ್‌ 1994ರಲ್ಲಿ ಮೇರಾ ಪ್ಯಾರಾ ಭಾರತ್‌ ಸಿನಿಮಾದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. ನಂತರ ಜೋಶ್, ಕಾರ್ಗಿಲ್‌ ಎಲ್‌ಒಸಿ, ಲಕ್ಷ್ಯ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ 2022ರಲ್ಲಿ ನೋ ಮಿನ್ಸ್‌ ನೋ ಮತ್ತು ದಿ ಗುಡ್‌ ಮಹಾರಾಜ ಎಂಬ ಸಿನಿಮಾಗಳಲ್ಲೂ ನಟಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

33 mins ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

39 mins ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

49 mins ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

1 hour ago