ಈ ಹಿಂದೆ ‘ಹನುಮಾನ್’ ಸಿನಿಮಾ ನಿರ್ದೇಶಿಸಿ ಮೆಚ್ಚುಗೆಗೆ ಪಾತ್ರವಾಗಿದ್ದ ಪ್ರಶಾಂತ್ ವರ್ಮಾ, ‘ಹನುಮಾನ್ 2’ ಜೊತೆಗೆ ನಂದಮೂರಿ ಬಾಲಕೃಷ್ಣ ಅವರ ಮಗ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಶಾಂತ್ ಭಾರತದ ಮೊದಲ ಮಹಿಳಾ ಸೂಪರ್ ಹೀರೋ ‘ಮಹಾಕಾಳಿ’ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ.
ಪ್ರಶಾಂತ್ ವರ್ಮಾ ತಮ್ಮದೇ ಸಿನಿಮ್ಯಾಟಿಕ್ ಯೂನಿವರ್ಸ್ ನಡಿ ಮೂರನೇ ಚಿತ್ರವನ್ನು ಇತ್ತೀಚೆಗೆ ಘೋಷಿಸಿದ್ದಾರೆ. ‘ಮಹಾಕಾಳಿ’ ಚಿತ್ರಕ್ಕೆ ಪ್ರಶಾಂತ್ ಕಥೆ ಬರೆದಿದ್ದು, ಈ ಹಿಂದೆ ‘ಮಾರ್ಟಿನ್ ಲೂಥರ್ ಕಿಂಗ್’ ಎಂಬ ಚಿತ್ರ ನಿರ್ದೇಶಿಸಿದ್ದ ಪೂಜಾ ಕೊಲ್ಲೂರು, ‘ಮಹಾಕಾಳಿ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಪಶ್ಚಿಮ ಬಂಗಾಳದ ಜನಪ್ರಿಯ ದೇವಿಯಾಗಿರುವ ಕಾಳಿ ಹಿನ್ನೆಲೆ, ಅಲ್ಲಿನ ನೆಲದ ಸಂಸ್ಕೃತಿಯನ್ನು ಸಿನಿಮಾ ರೂಪದಲ್ಲಿ ಕಟ್ಟಿಕೊಡಲಾಗುತ್ತದೆ. ಮಹಾಕಾಳಿ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಹುಡುಗಿಯೊಬ್ಬಳು ಹುಲಿಗೆ ತನ್ನ ಹಣೆ ಕೊಟ್ಟು ನಿಂತಿರುವ ಲುಕ್ ನ್ನು ಅನಾವರಣ ಮಾಡಲಾಗಿದೆ.
‘ಮಹಾಕಾಳಿ’ ಚಿತ್ರವನ್ನು ಆರ್.ಕೆ.ಎಂಡಿ ಸ್ಟುಡಿಯೋಸ್ ಬ್ಯಾನರ್ ನಡಿ ರಿಜ್ವಾನ್ ರಮೇಶ್ ದುಗ್ಗಲ್ ನಿರ್ಮಾಣ ಮಾಡುತ್ತಿದ್ದಾರೆ. ಸ್ಮರಣ್ ಸಾಯಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
‘ಮಹಾಕಾಳಿ’ ಚಿತ್ರವು ಭಾರತದ ಹಲವು ಭಾಷೆಗಳಲ್ಲದೆ, ವಿವಿಧ ವಿದೇಶಿ ಭಾಷೆಗಳಲ್ಲಿ ಚಿತ್ರ ಮೂಡಿ ಬರಲಿದೆ. ಶೀಘ್ರದಲ್ಲೇ ಚಿತ್ರದ ತಾರಾಬಳಗ ಹಾಗೂ ಉಳಿದ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ಸಿಗುವ ನಿರೀಕ್ಷೆ ಇದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…