ಮನರಂಜನೆ

ಭಾರತದ ಮೊದಲ ಮಹಿಳಾ ಸೂಪರ್ ಹೀರೋ ‘ಮಹಾಕಾಳಿ’

ಈ ಹಿಂದೆ ‘ಹನುಮಾನ್’ ಸಿನಿಮಾ ನಿರ್ದೇಶಿಸಿ ಮೆಚ್ಚುಗೆಗೆ ಪಾತ್ರವಾಗಿದ್ದ ಪ್ರಶಾಂತ್ ವರ್ಮಾ, ‘ಹನುಮಾನ್ 2’ ಜೊತೆಗೆ ನಂದಮೂರಿ ಬಾಲಕೃಷ್ಣ ಅವರ ಮಗ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಶಾಂತ್ ಭಾರತದ ಮೊದಲ ಮಹಿಳಾ ಸೂಪರ್ ಹೀರೋ ‘ಮಹಾಕಾಳಿ’ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ.

ಪ್ರಶಾಂತ್ ವರ್ಮಾ ತಮ್ಮದೇ ಸಿನಿಮ್ಯಾಟಿಕ್ ಯೂನಿವರ್ಸ್ ನಡಿ ಮೂರನೇ ಚಿತ್ರವನ್ನು ಇತ್ತೀಚೆಗೆ ಘೋಷಿಸಿದ್ದಾರೆ. ‘ಮಹಾಕಾಳಿ’ ಚಿತ್ರಕ್ಕೆ ಪ್ರಶಾಂತ್ ಕಥೆ ಬರೆದಿದ್ದು, ಈ ಹಿಂದೆ ‘ಮಾರ್ಟಿನ್ ಲೂಥರ್ ಕಿಂಗ್’ ಎಂಬ ಚಿತ್ರ ನಿರ್ದೇಶಿಸಿದ್ದ ಪೂಜಾ ಕೊಲ್ಲೂರು, ‘ಮಹಾಕಾಳಿ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ಜನಪ್ರಿಯ ದೇವಿಯಾಗಿರುವ ಕಾಳಿ ಹಿನ್ನೆಲೆ, ಅಲ್ಲಿನ ನೆಲದ ಸಂಸ್ಕೃತಿಯನ್ನು ಸಿನಿಮಾ ರೂಪದಲ್ಲಿ ಕಟ್ಟಿಕೊಡಲಾಗುತ್ತದೆ. ಮಹಾಕಾಳಿ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಹುಡುಗಿಯೊಬ್ಬಳು ಹುಲಿಗೆ ತನ್ನ ಹಣೆ ಕೊಟ್ಟು ನಿಂತಿರುವ ಲುಕ್ ನ್ನು ಅನಾವರಣ ಮಾಡಲಾಗಿದೆ.

‘ಮಹಾಕಾಳಿ’ ಚಿತ್ರವನ್ನು ಆರ್.ಕೆ.ಎಂಡಿ ಸ್ಟುಡಿಯೋಸ್ ಬ್ಯಾನರ್ ನಡಿ ರಿಜ್ವಾನ್ ರಮೇಶ್ ದುಗ್ಗಲ್ ನಿರ್ಮಾಣ ಮಾಡುತ್ತಿದ್ದಾರೆ. ಸ್ಮರಣ್ ಸಾಯಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

‘ಮಹಾಕಾಳಿ’ ಚಿತ್ರವು ಭಾರತದ ಹಲವು ಭಾಷೆಗಳಲ್ಲದೆ, ವಿವಿಧ ವಿದೇಶಿ ಭಾಷೆಗಳಲ್ಲಿ ಚಿತ್ರ ಮೂಡಿ ಬರಲಿದೆ. ಶೀಘ್ರದಲ್ಲೇ ಚಿತ್ರದ ತಾರಾಬಳಗ ಹಾಗೂ ಉಳಿದ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ಸಿಗುವ ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

18 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

23 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

24 hours ago