ಮನರಂಜನೆ

ಇದು ನಮ್ಮ ಮಣ್ಣಿನ ಐತಿಹಾಸಿಕ ಕಥೆ: ‘ಹಲಗಲಿ’ ಚಿತ್ರದ ‘ಫಸ್ಟ್ ರೋರ್’ ಬಿಡುಗಡೆ

ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ಚಿತ್ರಕ್ಕೆ ‘ಹಲಗಲಿ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಫಸ್ಟ್ ರೋರ್ ಎಂಬ ಹೆಸರಿನ ಟೀಸರ್, ಸ್ವಾತಂತ್ರ್ಯ ದಿನದ ಅಂಗವಾಗಿ ಗುರುವಾರ ಸಂಜೆ ಬಿಡುಗಡೆಯಾಗಿದೆ.

ಸುಕೇಶ್‍ ನಾಯಕ್ ನಿರ್ದೇಶನದ, ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಾಣದ ಬಹು ತಾರಾಗಣದ ಈ ಚಿತ್ರ, ಸ್ವಾತಂತ್ರ್ಯ ವೀರರ ಕಥೆ ಹೇಳುತ್ತದೆ. ಎರಡು ಭಾಗಗಳಲ್ಲಿ, ಐದು ಭಾಷೆಗಳಲ್ಲಿ ಪ್ಯಾನ್‍ ಇಂಡಿಯಾ ಚಿತ್ರವಗಿ ‘ಹಲಗಲಿ’ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಧನಂಜಯ್‍, ಜಡಗ ಎಂಬ ಪಾತ್ರ ಮಾಡುತ್ತಿದ್ದಾರೆ. ಸಪ್ತಮಿ ಗೌಡ ಈ ಚಿತ್ರದಲ್ಲಿ ಹೊನ್ನಿ ಎಂಬ ಪಾತ್ರ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಧನಂಜಯ್, ‘ಈ ಸಿನಿಮಾದಲ್ಲಿ ನಾನು ನಿಮಿತ್ತ ಮಾತ್ರ. ನಿರ್ದೇಶಕರು ಹಾಗೂ ನಿರ್ಮಾಪಕರು ನಿಜವಾದ ಹೀರೋಗಳು. ನಾನು‌ ಮೊದಲಿನಿಂದಲೂ ಐತಿಹಾಸಿಕ ಸಿನಿಮಾ ಮಾಡಬೇಕು ಎಂದು ಹೇಳುತ್ತಿದ್ದೆ. ನನ್ನ ವೃತ್ತಿಯ ಆರಂಭದಲ್ಲಿ ಆ ರೀತಿಯ ಪ್ರಯತ್ನ ಮಾಡಿದ್ದೆವು. ಆ ನಂತರ ‘ಅಲ್ಲಮ’ ಬಯೋಪಿಕ್ ಮಾಡಿದ್ದೆ.

ಈಗ ‘ಹಲಗಲಿ’. ಐತಿಹಾಸಿಕ ಚಿತ್ರಗಳೇನೋ ಪ್ರಾರಂಭವಾಗುತ್ತವೆ. ಆದರೆ, ಬಜೆಟ್‍ ಕೊರತೆಯಿಂದಾಗಿ ಕೆಲವು ಚಿತ್ರಗಳು ನಿಲ್ಲುತ್ತವೆ. ಕೆಲವೊಮ್ಮೆ ಹಣಕಾಸಿನ ಸಮಸ್ಯೆಯಿಂದಾಗಿ, ಇಂತಹ ಚಿತ್ರಗಳಿಗೆ ನ್ಯಾಯ ಒದಗಿಸಲು ಆಗುವುದಿಲ್ಲ. ‘ಹಲಗಲಿ’ ಸ್ಕ್ರೀಪ್ಟ್ ಓದಿದೆ. ಬಹಳ ಚೆನ್ನಾಗಿ ಬರೆದಿದ್ದರು. ಓದುತ್ತಾ ಓದುತ್ತಾ ಖುಷಿಯಾಯ್ತು. ತಂಡದವರನ್ನು ಭೇಟಿಯಾದೆ. ಅವರು ಬ್ರಿಟೀಷ್ ಭಾಗದ ಚಿತ್ರೀಕರಣ ಮುಗಿಸಿದ್ದರು. ದೃಶ್ಯಗಳನ್ನು ನೋಡಿ ಖುಷಿಯಾಯಿತು. ಅಲ್ಲಿಂದ ನಂಬಿಕೆ ಬಂತು. ಹಾಗಾಗಿ, ಈ ಚಿತ್ರ ಒಪ್ಪಿಕೊಂಡೆ. ಈ ಚಿತ್ರದ ಭಾಗವಾಗಿರುವುದು ಖುಷಿ ಕೊಟ್ಟಿದೆ’ ಎಂದರು.

ನಿರ್ದೇಶಕ ಸುಕೇಶ್ ನಾಯಕ್ ಮಾತನಾಡಿ, ‘ಇದು ನನ್ನ ಎರಡನೇ ಸಿನಿಮಾ. ಒಂದು ಆಯುಧಕ್ಕಾಗಿ ಇಡೀ ಊರೇ ಪ್ರಾಣ ಕೊಟ್ಟಿತ್ತು ಎಂಬ ವಿಷಯ ಓದಿ, ನನಗೆ ಆಸಕ್ತಿ ಹುಟ್ಟುಹಾಕಿತು. ಆ ಬಳಿಕ ಪುಸ್ತಕ ಓದಿದೆ. ಆ ಊರಿಗೆ ಹೋಗಿ ವಂಶಸ್ಥರನ್ನು ಭೇಟಿಯಾದೆ. ಅವರ ಮರಿ ಮೊಮ್ಮಕ್ಕಳು ಈಗಲೂ ಇದ್ದಾರೆ. ಅವರು ಹೋರಾಟ ಮಾಡಿದ ಆಯುಧಗಳನ್ನು ದೇವರಗುಡಿಯಲ್ಲಿ ಇಟ್ಟಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಚಿತ್ರ ಮಾಡಬೇಕೆಂದು ಕಥೆ ಮಾಡಿಟ್ಟುಕೊಂಡೆ. ಆದರೆ, ನಿರ್ಮಾಪಕರು ಇದನ್ನು ದೊಡ್ಡ ಮಟ್ಟದಲ್ಲಿ ಮಾಡಬೇಕು ಎಂದು ಹೇಳಿದರು. ಪ್ರತಿ ದೃಶ್ಯವನ್ನೂ ಕಮರ್ಷಿಯಲ್ ಆಗಿ ಮೂಲ ಕಥೆಗೆ ಎಲ್ಲೂ ಸಮಸ್ಯೆ ಆ‍ಗದಂತೆ ಬದಲಾಯಿಸಿದ್ದೇವೆ. ಈಗಾಗಲೇ, ಶೇ. 40ರಷ್ಟು ಚಿತ್ರೀಕರಣ ಮುಗಿದಿದೆ’ ಎಂದರು.

‘ಹಲಗಲಿ’ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ, ವಿಕ್ರಮ್ ಮೋರ್ ಸಾಹಸವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago