Categories: ಮನರಂಜನೆ

ಟೀಸರ್ ಬಂದು 3 ವರ್ಷಗಳ ನಂತರ ʼಕಟ್ಲೆʼ ಚಿತ್ರದ ಮೊದಲ ಹಾಡು ಬಿಡುಗಡೆ

ಕನ್ನಡ ಸಿನಿಮಾಗಳಲ್ಲಿ ಕಾಮಿಡಿ ಮಾಡಿಕೊಂಡಿದ್ದ ನಟ ಕೆಂಪೇಗೌಡ ಹೀರೋ ಆಗುತ್ತಿರುವ ವಿಷಯ ಹೊಸದೇನಲ್ಲ. ಕೆಲವು ವರ್ಷಗಳ ಹಿಂದೆ ಕೆಂಪೇಗೌಡ್ರು ಹೀರೋ ಆದ್ರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ ಸುಮಾರು ಮೂರು ವರ್ಷಗಳ ಹಿಂದೆ ಕೆಂಪೇಗೌಡ ಹೀರೋ ಆಗಿ ನಟಿಸಿದ ಮೊದಲ ಚಿತ್ರ ʼಕಟ್ಲೆʼ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ʼಆಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದರು. ಆ ನಂತರ ಚಿತ್ರದ ಸುದ್ದಿಯೇ ಇರಲಿಲ್ಲ. ಇದೀಗ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ.

ಹೌದು, ಮರೆತೇ ಹೋಗಿದ್ದ ʼಕಟ್ಲೆʼ ಚಿತ್ರ ಇದೀಗ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರತಂಡವು ಪ್ರಚಾರ ಶುರು ಮಾಡಿಕೊಂಡಿದ್ದು, ಮೊದಲ ಹಂತವಾಗಿ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.

ʼಕಟ್ಲೆʼ ಚಿತ್ರದ ಮೊದಲ ಹಾಡನ್ನು ನಟ ʼಡಾರ್ಲಿಂಗ್ʼ ಕೃಷ್ಣ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ʼಬಹದ್ದೂರ್ʼ ಚೇತನ್ ಕುಮಾರ್ ಬರೆದಿರುವ ʼಯಾರೋ ನಾ ಕಾಣೆ. ಚಂದಾಗೌಳೆ ಶಾಣೆ …ʼ ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.

ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ʼಶ್ರೀವಿದ ಅವರು ʼಕಟ್ಲೆʼ ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಸದ್ಯದಲ್ಲೇ ʼಕಟ್ಲೆʼ ಚಿತ್ರವನ್ನು ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆʼ ಎಂದರು.

ಭರತ್ ಗೌಡ ಮೂವೀಸ್ ಸಂಸ್ಥೆಯಡಿ ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ʼಕಟ್ಲೆʼ ಚಿತ್ರದಲ್ಲಿ ಕೆಂಪೇಗೌಡ, ಅಮೃತಾ, ಹರೀಶ್ ರಾಜ್, ಟೆನ್ನಿಸ್ ಕೃಷ್ಣ, ಕರಿಸುಬ್ಬು, ಎಂ.ಎಸ್. ಉಮೇಶ್, ನಿಸರ್ಗ ಅಪ್ಪಣ್ಣ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

19 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

19 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

19 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

19 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

19 hours ago