ಮನರಂಜನೆ

ಒಂದೇ ಸಿನಿಮಾದಲ್ಲಿ ಐವರು ನಿರ್ದೇಶಕರ ಐದು ವಿಭಿನ್ನ ಕಥೆಗಳು

ಕನ್ನಡದಲ್ಲಿ ಹೈಪರ್ ಲಿಂಕ್‍ ಸಿನಿಮಾಗಳ ಟ್ರೆಂಡ್‍ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್‍ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್‍ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್‍ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ ಒಂದೇ ಚಿತ್ರಗಳು ಕೆಲವು ಬಂದಿವೆ.

ಈ ಸಾಲಿಗೆ ಇದೀಗ ‘ಬಿಟಿಎಸ್‍’ ಸಹ ಸೇರಿದೆ. ‘ಬಿಟಿಎಸ್‍’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಬ್ಯಾಂಗ್ಟನ್‍ ಬಾಯ್ಸ್’ ಎಂಬ ದಕ್ಷಿಣ ಕೊರಿಯಾದ ಜನಪ್ರಿಯ ಮ್ಯೂಸಿಕ್ ಬ್ಯಾಂಡ್. ಬಿಟಿಎಸ್ ಎಂದರೆ ಬಿಹೈಂದ್‍ ದಿ ಸೀನ್ಸ್ ಅಂತಲೂ ಹೇಳುತ್ತಾರೆ. ಆದರೆ, ಈ ‘ಬಿಟಿಎಸ್‍’ ಎಂದರೆ, ಬಿಹೈಂಡ್‍ ದಿ ಸ್ಕ್ರೀನ್‍ ಎಂದರ್ಥ.

ಇದು ಸಿನಿಮಾದ ಹಿಂದಿನ ಕಥೆಗಳ ಕುರಿತ ಒಂದು ಸಿನಿಮಾ. ಒಂದೇ ಕಥೆಯಲ್ಲಿ ಚಿತ್ರರಂಗದ ಹಲವು ಪ್ಲಸ್, ಮೈನಸ್‍ಗಳನ್ನು ಹೇಳುವ ಪ್ರಯತ್ನ ಮಾಡಲಾಗಿದೆಯಂತೆ. ಚಿತ್ರರಂಗದ ಕುರಿತು ಐದು ವಿಭಿನ್ನ ಕಥೆಗಳನ್ನು ಹೇಳುವ ಪ್ರಯತ್ನ ಮಾಡಲಾಗಿದ್ದು, ಈ ಚಿತ್ರವನ್ನು ಐವರು ನಿರ್ದೇಶಕರು ನಿರ್ದೇಶನ ಮಾಡಿದ್ದಾರೆ.

‘ಬಿಟಿಎಸ್’ ( ಬಿಹೈಂಡ್ ದಿ ಸ್ಕ್ರೀನ್ ) ಚಿತ್ರದ ಟ್ರೇಲರ್‍ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಬಿಡುಗಡೆ ಆಗಿದೆ. ಈ ಟ್ರೇಲರ್‍ಗೆ ರಾಜ್ ಬಿ. ಶೆಟ್ಟಿ ಧ್ವನಿ ನೀಡಿದ್ದಾರೆ. ‘ಭೀಮ’ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್ ಮತ್ತು ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ.

ಈ ಪೈಕಿ ಅಪೂರ್ವ ಭಾರದ್ವಾಜ್‍ ಇದಕ್ಕೂ ಮುನ್ನ ‘ನಾನು ಅದು ಮತ್ತು ಸರೋಜ’, ‘ಬ್ಯಾಡ್‍’, ‘ಕ್ರಿಟಿಕಲ್‍ ಕೀರ್ತನೆಗಳು’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ನಿರ್ದೇಶನ ಮಾಡಿದ್ದಾರೆ. ತಮ್ಮ ಚಿತ್ರದ ಕುರಿತು ಮಾತನಾಡಿರುವ ಅಪೂರ್ವ, ‘ಸಿನಿಮಾದಲ್ಲಿ ಕೆಳ ಹಂತದಿಂದ ಬಂದ ಜನ ಸಾಕಷ್ಟು ಕಷ್ಟಪಟ್ಟಿರುತ್ತಾರೆ ಮತ್ತು ಹಲವು ಅವಮಾನಗಳನ್ನು ಎದುರಿಸಿರುತ್ತಾರೆ. ಒಬ್ಬ ಮೇಕಪ್‍ ಮ್ಯಾನ್, ತಾನು ಟಚಪ್‍ ಹುಡುಗನಾಗಿದ್ದಾಗ ಬೇರೆಯವರಿಂದ ಸಾಕಷ್ಟು ಅವಮಾನ ಎದುರಿಸಿರುತ್ತಾರೆ. ಅದೇ ರೀತಿ ಒಬ್ಬ ಸಹಾಯಕ ನಿರ್ದೇಶಕ ಸಹ ದಿನನಿತ್ಯ ಸಾಕಷ್ಟು ನೋವು ತಂದಿರುತ್ತಾರೆ. ಆ ತರಹದ ನೋವುಗಳನ್ನು ಈ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಈ ಕಥೆಯನ್ನು ನನಗೆ ಮೇಕಪ್‍ ಮಾಡಿದ ಹುಡುಗರಿಗೆ, ಸಹಾಯಕರಿಗೆ ಅರ್ಪಿಸುತ್ತೇನೆ’ ಎಂದರು.

‘ಬಿಟಿಎಸ್‍’ ಚಿತ್ರವನನ್ನು ಮುರಳಿಕೃಷ್ಣ ನಿರ್ಮಿಸಿದ್ದಾರೆ. ಚಿತ್ರದಲ್ಲಿ ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ವಿಜಯ್ ಕೃಷ್ಣ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…

13 mins ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

2 hours ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

2 hours ago

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…

2 hours ago

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

4 hours ago