ಕನ್ನಡದಲ್ಲಿ ಹೈಪರ್ ಲಿಂಕ್ ಸಿನಿಮಾಗಳ ಟ್ರೆಂಡ್ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ ಒಂದೇ ಚಿತ್ರಗಳು ಕೆಲವು ಬಂದಿವೆ.
ಈ ಸಾಲಿಗೆ ಇದೀಗ ‘ಬಿಟಿಎಸ್’ ಸಹ ಸೇರಿದೆ. ‘ಬಿಟಿಎಸ್’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಬ್ಯಾಂಗ್ಟನ್ ಬಾಯ್ಸ್’ ಎಂಬ ದಕ್ಷಿಣ ಕೊರಿಯಾದ ಜನಪ್ರಿಯ ಮ್ಯೂಸಿಕ್ ಬ್ಯಾಂಡ್. ಬಿಟಿಎಸ್ ಎಂದರೆ ಬಿಹೈಂದ್ ದಿ ಸೀನ್ಸ್ ಅಂತಲೂ ಹೇಳುತ್ತಾರೆ. ಆದರೆ, ಈ ‘ಬಿಟಿಎಸ್’ ಎಂದರೆ, ಬಿಹೈಂಡ್ ದಿ ಸ್ಕ್ರೀನ್ ಎಂದರ್ಥ.
ಇದು ಸಿನಿಮಾದ ಹಿಂದಿನ ಕಥೆಗಳ ಕುರಿತ ಒಂದು ಸಿನಿಮಾ. ಒಂದೇ ಕಥೆಯಲ್ಲಿ ಚಿತ್ರರಂಗದ ಹಲವು ಪ್ಲಸ್, ಮೈನಸ್ಗಳನ್ನು ಹೇಳುವ ಪ್ರಯತ್ನ ಮಾಡಲಾಗಿದೆಯಂತೆ. ಚಿತ್ರರಂಗದ ಕುರಿತು ಐದು ವಿಭಿನ್ನ ಕಥೆಗಳನ್ನು ಹೇಳುವ ಪ್ರಯತ್ನ ಮಾಡಲಾಗಿದ್ದು, ಈ ಚಿತ್ರವನ್ನು ಐವರು ನಿರ್ದೇಶಕರು ನಿರ್ದೇಶನ ಮಾಡಿದ್ದಾರೆ.
‘ಬಿಟಿಎಸ್’ ( ಬಿಹೈಂಡ್ ದಿ ಸ್ಕ್ರೀನ್ ) ಚಿತ್ರದ ಟ್ರೇಲರ್ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಬಿಡುಗಡೆ ಆಗಿದೆ. ಈ ಟ್ರೇಲರ್ಗೆ ರಾಜ್ ಬಿ. ಶೆಟ್ಟಿ ಧ್ವನಿ ನೀಡಿದ್ದಾರೆ. ‘ಭೀಮ’ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್ ಮತ್ತು ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ.
ಈ ಪೈಕಿ ಅಪೂರ್ವ ಭಾರದ್ವಾಜ್ ಇದಕ್ಕೂ ಮುನ್ನ ‘ನಾನು ಅದು ಮತ್ತು ಸರೋಜ’, ‘ಬ್ಯಾಡ್’, ‘ಕ್ರಿಟಿಕಲ್ ಕೀರ್ತನೆಗಳು’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ನಿರ್ದೇಶನ ಮಾಡಿದ್ದಾರೆ. ತಮ್ಮ ಚಿತ್ರದ ಕುರಿತು ಮಾತನಾಡಿರುವ ಅಪೂರ್ವ, ‘ಸಿನಿಮಾದಲ್ಲಿ ಕೆಳ ಹಂತದಿಂದ ಬಂದ ಜನ ಸಾಕಷ್ಟು ಕಷ್ಟಪಟ್ಟಿರುತ್ತಾರೆ ಮತ್ತು ಹಲವು ಅವಮಾನಗಳನ್ನು ಎದುರಿಸಿರುತ್ತಾರೆ. ಒಬ್ಬ ಮೇಕಪ್ ಮ್ಯಾನ್, ತಾನು ಟಚಪ್ ಹುಡುಗನಾಗಿದ್ದಾಗ ಬೇರೆಯವರಿಂದ ಸಾಕಷ್ಟು ಅವಮಾನ ಎದುರಿಸಿರುತ್ತಾರೆ. ಅದೇ ರೀತಿ ಒಬ್ಬ ಸಹಾಯಕ ನಿರ್ದೇಶಕ ಸಹ ದಿನನಿತ್ಯ ಸಾಕಷ್ಟು ನೋವು ತಂದಿರುತ್ತಾರೆ. ಆ ತರಹದ ನೋವುಗಳನ್ನು ಈ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಈ ಕಥೆಯನ್ನು ನನಗೆ ಮೇಕಪ್ ಮಾಡಿದ ಹುಡುಗರಿಗೆ, ಸಹಾಯಕರಿಗೆ ಅರ್ಪಿಸುತ್ತೇನೆ’ ಎಂದರು.
‘ಬಿಟಿಎಸ್’ ಚಿತ್ರವನನ್ನು ಮುರಳಿಕೃಷ್ಣ ನಿರ್ಮಿಸಿದ್ದಾರೆ. ಚಿತ್ರದಲ್ಲಿ ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ವಿಜಯ್ ಕೃಷ್ಣ ಮುಂತಾದವರು ನಟಿಸಿದ್ದಾರೆ.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…