ಮನರಂಜನೆ

ಒಂದೇ ಸಿನಿಮಾದಲ್ಲಿ ಐವರು ನಿರ್ದೇಶಕರ ಐದು ವಿಭಿನ್ನ ಕಥೆಗಳು

ಕನ್ನಡದಲ್ಲಿ ಹೈಪರ್ ಲಿಂಕ್‍ ಸಿನಿಮಾಗಳ ಟ್ರೆಂಡ್‍ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್‍ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್‍ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್‍ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ ಒಂದೇ ಚಿತ್ರಗಳು ಕೆಲವು ಬಂದಿವೆ.

ಈ ಸಾಲಿಗೆ ಇದೀಗ ‘ಬಿಟಿಎಸ್‍’ ಸಹ ಸೇರಿದೆ. ‘ಬಿಟಿಎಸ್‍’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಬ್ಯಾಂಗ್ಟನ್‍ ಬಾಯ್ಸ್’ ಎಂಬ ದಕ್ಷಿಣ ಕೊರಿಯಾದ ಜನಪ್ರಿಯ ಮ್ಯೂಸಿಕ್ ಬ್ಯಾಂಡ್. ಬಿಟಿಎಸ್ ಎಂದರೆ ಬಿಹೈಂದ್‍ ದಿ ಸೀನ್ಸ್ ಅಂತಲೂ ಹೇಳುತ್ತಾರೆ. ಆದರೆ, ಈ ‘ಬಿಟಿಎಸ್‍’ ಎಂದರೆ, ಬಿಹೈಂಡ್‍ ದಿ ಸ್ಕ್ರೀನ್‍ ಎಂದರ್ಥ.

ಇದು ಸಿನಿಮಾದ ಹಿಂದಿನ ಕಥೆಗಳ ಕುರಿತ ಒಂದು ಸಿನಿಮಾ. ಒಂದೇ ಕಥೆಯಲ್ಲಿ ಚಿತ್ರರಂಗದ ಹಲವು ಪ್ಲಸ್, ಮೈನಸ್‍ಗಳನ್ನು ಹೇಳುವ ಪ್ರಯತ್ನ ಮಾಡಲಾಗಿದೆಯಂತೆ. ಚಿತ್ರರಂಗದ ಕುರಿತು ಐದು ವಿಭಿನ್ನ ಕಥೆಗಳನ್ನು ಹೇಳುವ ಪ್ರಯತ್ನ ಮಾಡಲಾಗಿದ್ದು, ಈ ಚಿತ್ರವನ್ನು ಐವರು ನಿರ್ದೇಶಕರು ನಿರ್ದೇಶನ ಮಾಡಿದ್ದಾರೆ.

‘ಬಿಟಿಎಸ್’ ( ಬಿಹೈಂಡ್ ದಿ ಸ್ಕ್ರೀನ್ ) ಚಿತ್ರದ ಟ್ರೇಲರ್‍ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಬಿಡುಗಡೆ ಆಗಿದೆ. ಈ ಟ್ರೇಲರ್‍ಗೆ ರಾಜ್ ಬಿ. ಶೆಟ್ಟಿ ಧ್ವನಿ ನೀಡಿದ್ದಾರೆ. ‘ಭೀಮ’ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್ ಮತ್ತು ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ.

ಈ ಪೈಕಿ ಅಪೂರ್ವ ಭಾರದ್ವಾಜ್‍ ಇದಕ್ಕೂ ಮುನ್ನ ‘ನಾನು ಅದು ಮತ್ತು ಸರೋಜ’, ‘ಬ್ಯಾಡ್‍’, ‘ಕ್ರಿಟಿಕಲ್‍ ಕೀರ್ತನೆಗಳು’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ನಿರ್ದೇಶನ ಮಾಡಿದ್ದಾರೆ. ತಮ್ಮ ಚಿತ್ರದ ಕುರಿತು ಮಾತನಾಡಿರುವ ಅಪೂರ್ವ, ‘ಸಿನಿಮಾದಲ್ಲಿ ಕೆಳ ಹಂತದಿಂದ ಬಂದ ಜನ ಸಾಕಷ್ಟು ಕಷ್ಟಪಟ್ಟಿರುತ್ತಾರೆ ಮತ್ತು ಹಲವು ಅವಮಾನಗಳನ್ನು ಎದುರಿಸಿರುತ್ತಾರೆ. ಒಬ್ಬ ಮೇಕಪ್‍ ಮ್ಯಾನ್, ತಾನು ಟಚಪ್‍ ಹುಡುಗನಾಗಿದ್ದಾಗ ಬೇರೆಯವರಿಂದ ಸಾಕಷ್ಟು ಅವಮಾನ ಎದುರಿಸಿರುತ್ತಾರೆ. ಅದೇ ರೀತಿ ಒಬ್ಬ ಸಹಾಯಕ ನಿರ್ದೇಶಕ ಸಹ ದಿನನಿತ್ಯ ಸಾಕಷ್ಟು ನೋವು ತಂದಿರುತ್ತಾರೆ. ಆ ತರಹದ ನೋವುಗಳನ್ನು ಈ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಈ ಕಥೆಯನ್ನು ನನಗೆ ಮೇಕಪ್‍ ಮಾಡಿದ ಹುಡುಗರಿಗೆ, ಸಹಾಯಕರಿಗೆ ಅರ್ಪಿಸುತ್ತೇನೆ’ ಎಂದರು.

‘ಬಿಟಿಎಸ್‍’ ಚಿತ್ರವನನ್ನು ಮುರಳಿಕೃಷ್ಣ ನಿರ್ಮಿಸಿದ್ದಾರೆ. ಚಿತ್ರದಲ್ಲಿ ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ವಿಜಯ್ ಕೃಷ್ಣ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

8 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

8 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

8 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

8 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

9 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

9 hours ago