ಮನರಂಜನೆ

ಮುಂದಕ್ಕೆ ಹೋದ ‘ಫ್ಲರ್ಟ್’: ನ.28ರಂದು ಬಿಡುಗಡೆ

ಚಂದನ್‍ ಕುಮಾರ್ ಅಭಿನಯದ ಮತ್ತು ನಿರ್ದೇಶನದ ‘ಫ್ಲರ್ಟ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ನವೆಂಬರ್.07ರಂದು ಬಿಡಗುಡೆಯಾಗಬೇಕಿತ್ತು. ಚಿತ್ರತಂಡ ಕೆಲವು ದಿನಗಳ ಹಿಂದೆ ಟ್ರೇಲರ್ ಬಿಡುಗಡೆ ಮಾಡುವುದರ ಜೊತೆಗೆ, ಬಿಡುಗಡೆ ದಿನಾಂಕವನ್ನೂ ಘೋಷಿಸಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ಬಿಡುಗಡೆಯಾಗಲೇ ಇಲ್ಲ.

ಇದೀಗ ಚಿತ್ರದ ಹೊಸ ಬಿಡುಗಡೆ ದಿನಾಂಕ ಹೊರಬಿದ್ದಿದೆ. ಅದರ ಪ್ರಕಾರ, ನವೆಂಬರ್.28ರಂದು ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಲು ಕಾರಣವೇನು? ಎಂಬ ಪ್ರಶ್ನೆ ಬರಬಹುದು. ಚಿತ್ರವನ್ನು ಕೆ.ವಿ.ಎನ್‍ ಪ್ರೊಡಕ್ಷನ್ಸ್ ಸಂಸ್ಥೆಯು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ. ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವನ್ನೂ ಅದೇ ಸಂಸ್ಥೆ ಬಿಡುಗಡೆ ಮಾಡಬೇಕಿತ್ತು. ‘ಬ್ರ್ಯಾಟ್‍’ ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದು ಎಂದು ‘ಫ್ಲರ್ಟ್’ ಮುಂದಕ್ಕೆ ಹೋಗಿದ್ದಾನೆ.

ಇದನ್ನು ಓದಿ: ಕುಂಭನಾದ ಪೃಥ್ವಿರಾಜ್‍: ಮಹೇಶ್‍ ಬಾಬುಗೆ ವಿಲನ್‍

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಖ್ಯಾತಿಯ ಚಂದನ್‍ ಕುಮಾರ್, ‘ಫ್ಲರ್ಟ್’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಚಿತ್ರದ ನಾಯಕನಾಗಿಯೂ ಅಭಿನಯಿಸಿದ್ದಾರೆ. ಎವರೆಸ್ಟ್ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಚಿತ್ರವನ್ನು ನಿರ್ಮಿಸಿದ್ದಾರೆ.

ಸಾಮಾನ್ಯವಾಗಿ ಪ್ರೇಮಿಗಳ ಮಧ್ಯೆ ಬ್ರೇಕಪ್‍ ಆದರೆ ಒಂದು ಹಾಡು ಇರುತ್ತದೆ. ಇದು ಸ್ನೇಹಿತರ ನಡುವೆ ಬ್ರೇಕಪ್‍ ಆದಾಗ ಬರುವ ಹಾಡು. ಈ ಹಾಡಿಗೆ ಚಂದನ್‍ ಸಾಹಿತ್ಯ ಬರೆದಿದ್ದು, ನಕುಲ್‍ ಅಭಯಂಕರ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ Friendship Anthemಗೆ ಸುದೀಪ್‍ ಧ್ವನಿಯಾಗಿದ್ದಾರೆ.

ಈ ಚಿತ್ರದಲ್ಲಿ ಚಂದನ್‍ಗೆ ನಿಮಿಕಾ ರತ್ನಾಕರ್ ಮತ್ತು ಅಕ್ಷತಾ ಬೋಪಣ್ಣ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಅವಿನಾಶ್‍, ಗಿರೀಶ್‍ ಶಿವಣ್ಣ, ಶ್ರುತಿ, ಸಾಧು ಕೋಕಿಲ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರಕ್ಕೆ ನಕುಲ್‍ ಅಭಯಂಕರ್‍ ಮತ್ತು ಜಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ಎಚ್‍.ಸಿ.ವೇಣು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

1 hour ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

1 hour ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

2 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

2 hours ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

2 hours ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

3 hours ago