ಮನರಂಜನೆ

ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ‘ಚಾಮಯ್ಯ ಸನ್ ಆಫ್ ರಾಮಾಚಾರಿ’

‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ.

ಜೋಳಿಗೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪಲ್ಲಕ್ಕಿ ರಾಧಾಕೃಷ್ಣ ಕಥೆ-ಚಿತ್ರಕಥೆ ರಚಿಸುವುದರ ಜೊತೆಗೆ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿ ಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ‘ಕೋಟೆ ನಾಡಿನ ನಾಗರ ಹಾವು’ ಎಂಬ ಅಡಿಬರಹವಿದೆ.

ಚಿತ್ರ ಬಿಡುಗಡೆಯ ಕುರಿತು ಮಾತನಾಡುವ ಪಲ್ಲಕ್ಕಿ ರಾಧಾಕೃಷ್ಣ, ’ಡಾ. ವಿಷ್ಣುವರ್ಧನ್ ಹುಟ್ಟುಹಬ್ದ, ಸೆಪ್ಟಂಬರ್.18ರಂದು ತೆರೆಗೆ ತರುವ ಯೋಜನೆ ಇತ್ತು. ಆದರೆ ಈಗಾಗಲೇ 10 ಸಿನಿಮಾಗಳು ಚಿತ್ರಮಂದಿರ ಗೇಟ್‌ನಲ್ಲಿ ನಿಂತಿವೆ. ಆದಕಾರಣ ಸಿನಿಪಂಡಿತರು, ಸಾಹಸ ಸಿಂಹ ಅಭಿಮಾನಿಗಳಿಗೆ ಪ್ರತ್ಯೇಕವಾಗಿ ಪ್ರದರ್ಶನ ಮಾಡಲು ಚಿಂತನೆ ನಡೆಸಲಾಗಿದೆ. ಮೈಸೂರು, ಚಿತ್ರದುರ್ಗ, ಶಿವಮೊಗ್ಗದಲ್ಲಿ ಹೆಚ್ಚು ಅಭಿಮಾನಿಗಳು ಇರುವುದರಿಂದ, ಒಂದು ದಿನದ ಗಳಿಕೆ ಹಣವನ್ನು ಅಭಿಮಾನ ಸಂಘದ ಸಮಾಜಮುಖಿ ಕಾರ್ಯಕ್ಕೆ ನೀಡಲಾಗುವುದು’ ಎಂದರು.

‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದಲ್ಲಿ ರಾಮಾಚಾರಿ ಪಾತ್ರವನ್ನು ಜಯಶ್ರೀರಾಜ್‍ ನಿರ್ವಹಿಸಿದ್ದಾರೆ. ಚಿತ್ರೀಕರಣದ ಅನುಭವ ಹಂಚಿಕೊಂಡು, ’ಪಾತ್ರಕ್ಕಾಗಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೇನೆ. ಬದ್ದತೆಯಿಂದ ಪ್ರಯೋಗ ಮಾಡಿದ್ದೇನೆ’ ಎಂದರು.

ಮಿಕ್ಕಂತೆ ಪ್ರೇಮಾ ಗೌಡ, ಪ್ರದೀಪ್‍ ಶಾಸ್ತ್ರಿ, ಚೈತ್ರಾ, ಪ್ರಕಾಶ್‍ ಅರಸು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸ್ಯಾಂ ಸಂಗೀತ ಮತ್ತು ಎಂ.ಆರ್‍.ಸೀನು ಛಾಯಾಗ್ರಹಣವಿದೆ. ಈ ಚಿತ್ರಕ್ಕಾಗಿ ಬೆಂಗಳೂರು, ಬಾದಾಮಿ, ಬನಶಂಕರಿ, ಐಹೊಳೆ ಸುಂದರ ತಾಣಗಳಲ್ಲಿ ಶೂಟಿಂಗ್ ನಡೆಸಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

11 mins ago

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…

35 mins ago

ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಹೈಕೋರ್ಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು…

60 mins ago

ಹನೂರು| ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸಾವು

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್‌ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…

1 hour ago

ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರ ಬಂಧನ

ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…

2 hours ago

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…

2 hours ago