ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ.
ದರ್ಶನ್ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಅನ್ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಷ್ ಅವರು ಪೋಸ್ಟ್ವೊಂದನ್ನು ಹಾಕಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನು ತಿರುಚುತ್ತಾರೋ, ತಮ್ಮದೇ ತಪ್ಪನ್ನು ಇಟ್ಟುಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನು ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನು ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳುವುದು ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.
ಈ ಬೆಳವಣಿಗೆಯಿಂದ ದರ್ಶನ್ ಅಭಿಮಾನಿಗಳಿಗೆ ಶಾಕ್ ಎದುರಾಗಿದ್ದು, ಅಂಬರೀಷ್ ಫ್ಯಾಮಿಲಿ ಮೇಲೆ ನಟ ದರ್ಶನ್ಗೆ ಬೇಸರವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…