ಮನರಂಜನೆ

‘ದುನಿಯಾ’ ವಿಜಯ್‍ ನಿರ್ದೇಶನದ ಚಿತ್ರದಲ್ಲಿ ನಟಿಸಲು ಗಣೇಶ್‍ ಒಪ್ಪಿಗೆ …

‘ದುನಿಯಾ’ ವಿಜಯ್‍ ಮತ್ತು ಗಣೇಶ್‍ ಇಬ್ಬರೂ ಹಲವು ವರ್ಷಗಳ ಗೆಳೆಯರು. ನಾಯಕರಾಗುವುದಕ್ಕಿಂದ ಮುನ್ನ ಇಬ್ಬರೂ ಸಾಕಷ್ಟು ಸೈಕಲ್ ಹೊಡೆದು ಚಿತ್ರರಂಗದಲ್ಲಿ ಬೆಳೆದವರು. ಇಬ್ಬರೂ ಸಾಕಷ್ಟು ಬೆಳೆದರೂ, ಅವರಿಬ್ಬರ ಗೆಳೆತನ ಸ್ವಲ್ಪವೂ ಕಡಿಮೆಯಾಗಿಲ್ಲ. ಈಗ ಗಣೇಶ್‍ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು ‘ದುನಿಯಾ’ ವಿಜಯ್‍ ಆಸೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಗಣೇಶ್‍ ಸಹ ಒಪ್ಪಿಗೆ ಸೂಚಿಸಿದ್ದಾರೆ.

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇನ್ನು, ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಎರಡು ದಶಕಗಳ ಸ್ನೇಹಿತರು ಒಟ್ಟಿಗೆ ಸಿಕ್ಕಿದ್ದಾರೆ. ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕುವುದರ ಜೊತೆಗೆ ತಾವು ನಡೆದು ಬಂದ ಹಾದಿಯ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗಣೇಶ್‍ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವ ಆಸೆಯನ್ನು ‘ದುನಿಯಾ’ ವಿಜಯ್‍ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ‘ದುನಿಯಾ’ ವಿಜಯ್‍, ‘ನನಗೊಂದು ಆಸೆ ಇದೆ. ನನ್ನ ನಿರ್ದೇಶನದಲ್ಲಿ, ನಮ್ಮಿಬ್ಬರ ಕಾಂಬಿನೇಷನ್‍ನಲ್ಲಿ ಒಂದು ಚಿತ್ರ ಮಾಡಬೇಕು. ಅದು ದಾಖಲೆಯಾಗಿ ಉಳಿಯಬೇಕು.. ಎಷ್ಟೇ ದುಃಖ ಇದ್ದರೂ ಮರೆಸಿ ನಗಿಸುವ ತಾಕತ್ತು ನಿನಗಿದೆ. ಎಮೋಷನಲ್‍ ದೃಶ್ಯಗಳಲ್ಲೂ ಅಷ್ಟೇ. ನಿನ್ನ ಸಾಮರ್ಥ್ಯವೇ ಬೇರೆ. ಅದು ನನ್ನಿಂದ ಸಾಧ್ಯವಿಲ್ಲ. ನಿನ್ನಲ್ಲಿರುವ ಆ ಸಾಮರ್ಥ್ಯವನ್ನ ನೋಡಿ, ನಿನ್ನ ಜೊತೆಗೆ ಚಿತ್ರ ಮಾಡಬೇಕು ಎಂಬ ಆಸೆ ಇದೆ. ಒಂದೊಳ್ಳೆಯ ವಿಷಯ ಇಟ್ಟುಕೊಂಡು ಸಿನಿಮಾ ಮಾಡೋಣ. ಯೋಚನೆ ಮಾಡುತ್ತಲೇ ಇದ್ದೇನೆ. ಒಂದು ವಿಷಯ ಸಿಗಬೇಕು ಅಷ್ಟೇ. ಸಿಕ್ಕರೆ ಖಂಡಿತಾ ಬಿಡುವುದು ಬೇಡ. ಒಟ್ಟಿಗೆ ಚಿತ್ರ ಮಾಡೋಣ’ ಎಂದು ವಿಜಯ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗಣೇಶ್, ‘ನೀನು ಯಾವಾಗ ಹೇಳ್ತೀಯೋ, ನಾನು ಬಂದು ನಟಿಸುವುದಕ್ಕೆ ರೆಡಿ. ನೀನು ಸ್ಕ್ರಿಪ್ಟ್ ಮಾಡು. ನಾವಿಬ್ಬರೂ ಖಂಡಿತವಾಗಿ ಜೊತೆಯಾಗಿ ಕೆಲಸ ಮಾಡೋಣ. ಇಂಥಾ ದಿನ ಶೂಟಿಂಗ್ ಅಂತ ಹೇಳು. ನಾನು ಬರ್ತೀನಿ’ ಎಂದು ಹೇಳಿದ್ದಾರೆ.

ಒಟ್ಟಿಗೆ ಚಿತ್ರ ಮಾಡಬೇಕು ಎಂಬುದು ವಿಜಯ್‍ ಮತ್ತು ಗಣೇಶ್‍ ಆಸೆಯಷ್ಟೇ ಅಲ್ಲ, ಅವರಿಬ್ಬರ ಅಭಿಮಾನಿಗಳ ಆಸೆಯೂ ಹೌದು. ಇದು ಸಾಧ್ಯವಾದಷ್ಟೂ ಬೇಗ ಕಾರ್ಯರೂಪಕ್ಕೆ ಬರಲಿ.

ಆಂದೋಲನ ಡೆಸ್ಕ್

Recent Posts

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…

3 mins ago

‘ಗಾಡ್ ಫಾದರ್’ ಇಲ್ಲದೇ ಬರೆಯಲಾಗುವುದಿಲ್ಲವೇ?

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…

7 mins ago

ಅವಕಾಶ ವಂಚಿತ ಚೆನ್ನೈ ಮಕ್ಕಳಿಗೆ ಪ್ರವಾಸ ಭಾಗ್ಯ

ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…

18 mins ago

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

10 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

11 hours ago