ಮನರಂಜನೆ

‘ದುನಿಯಾ’ ವಿಜಯ್‍ ನಿರ್ದೇಶನದ ಚಿತ್ರದಲ್ಲಿ ನಟಿಸಲು ಗಣೇಶ್‍ ಒಪ್ಪಿಗೆ …

‘ದುನಿಯಾ’ ವಿಜಯ್‍ ಮತ್ತು ಗಣೇಶ್‍ ಇಬ್ಬರೂ ಹಲವು ವರ್ಷಗಳ ಗೆಳೆಯರು. ನಾಯಕರಾಗುವುದಕ್ಕಿಂದ ಮುನ್ನ ಇಬ್ಬರೂ ಸಾಕಷ್ಟು ಸೈಕಲ್ ಹೊಡೆದು ಚಿತ್ರರಂಗದಲ್ಲಿ ಬೆಳೆದವರು. ಇಬ್ಬರೂ ಸಾಕಷ್ಟು ಬೆಳೆದರೂ, ಅವರಿಬ್ಬರ ಗೆಳೆತನ ಸ್ವಲ್ಪವೂ ಕಡಿಮೆಯಾಗಿಲ್ಲ. ಈಗ ಗಣೇಶ್‍ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು ‘ದುನಿಯಾ’ ವಿಜಯ್‍ ಆಸೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಗಣೇಶ್‍ ಸಹ ಒಪ್ಪಿಗೆ ಸೂಚಿಸಿದ್ದಾರೆ.

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇನ್ನು, ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಎರಡು ದಶಕಗಳ ಸ್ನೇಹಿತರು ಒಟ್ಟಿಗೆ ಸಿಕ್ಕಿದ್ದಾರೆ. ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕುವುದರ ಜೊತೆಗೆ ತಾವು ನಡೆದು ಬಂದ ಹಾದಿಯ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗಣೇಶ್‍ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವ ಆಸೆಯನ್ನು ‘ದುನಿಯಾ’ ವಿಜಯ್‍ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ‘ದುನಿಯಾ’ ವಿಜಯ್‍, ‘ನನಗೊಂದು ಆಸೆ ಇದೆ. ನನ್ನ ನಿರ್ದೇಶನದಲ್ಲಿ, ನಮ್ಮಿಬ್ಬರ ಕಾಂಬಿನೇಷನ್‍ನಲ್ಲಿ ಒಂದು ಚಿತ್ರ ಮಾಡಬೇಕು. ಅದು ದಾಖಲೆಯಾಗಿ ಉಳಿಯಬೇಕು.. ಎಷ್ಟೇ ದುಃಖ ಇದ್ದರೂ ಮರೆಸಿ ನಗಿಸುವ ತಾಕತ್ತು ನಿನಗಿದೆ. ಎಮೋಷನಲ್‍ ದೃಶ್ಯಗಳಲ್ಲೂ ಅಷ್ಟೇ. ನಿನ್ನ ಸಾಮರ್ಥ್ಯವೇ ಬೇರೆ. ಅದು ನನ್ನಿಂದ ಸಾಧ್ಯವಿಲ್ಲ. ನಿನ್ನಲ್ಲಿರುವ ಆ ಸಾಮರ್ಥ್ಯವನ್ನ ನೋಡಿ, ನಿನ್ನ ಜೊತೆಗೆ ಚಿತ್ರ ಮಾಡಬೇಕು ಎಂಬ ಆಸೆ ಇದೆ. ಒಂದೊಳ್ಳೆಯ ವಿಷಯ ಇಟ್ಟುಕೊಂಡು ಸಿನಿಮಾ ಮಾಡೋಣ. ಯೋಚನೆ ಮಾಡುತ್ತಲೇ ಇದ್ದೇನೆ. ಒಂದು ವಿಷಯ ಸಿಗಬೇಕು ಅಷ್ಟೇ. ಸಿಕ್ಕರೆ ಖಂಡಿತಾ ಬಿಡುವುದು ಬೇಡ. ಒಟ್ಟಿಗೆ ಚಿತ್ರ ಮಾಡೋಣ’ ಎಂದು ವಿಜಯ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗಣೇಶ್, ‘ನೀನು ಯಾವಾಗ ಹೇಳ್ತೀಯೋ, ನಾನು ಬಂದು ನಟಿಸುವುದಕ್ಕೆ ರೆಡಿ. ನೀನು ಸ್ಕ್ರಿಪ್ಟ್ ಮಾಡು. ನಾವಿಬ್ಬರೂ ಖಂಡಿತವಾಗಿ ಜೊತೆಯಾಗಿ ಕೆಲಸ ಮಾಡೋಣ. ಇಂಥಾ ದಿನ ಶೂಟಿಂಗ್ ಅಂತ ಹೇಳು. ನಾನು ಬರ್ತೀನಿ’ ಎಂದು ಹೇಳಿದ್ದಾರೆ.

ಒಟ್ಟಿಗೆ ಚಿತ್ರ ಮಾಡಬೇಕು ಎಂಬುದು ವಿಜಯ್‍ ಮತ್ತು ಗಣೇಶ್‍ ಆಸೆಯಷ್ಟೇ ಅಲ್ಲ, ಅವರಿಬ್ಬರ ಅಭಿಮಾನಿಗಳ ಆಸೆಯೂ ಹೌದು. ಇದು ಸಾಧ್ಯವಾದಷ್ಟೂ ಬೇಗ ಕಾರ್ಯರೂಪಕ್ಕೆ ಬರಲಿ.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

16 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

16 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

17 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

17 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

17 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

17 hours ago