ಮನರಂಜನೆ

ಹರ್ಷಿಕಾಗೆ ಬೇಬಿ ಶವರ್ ಕಾರ್ಯಕ್ರಮ ಆಯೋಜಿಸಿದ್ದ ಗಣೇಶ್‍ ದಂಪತಿ

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಮಗುವಿನ ಆಗಮನದ ಖುಷಿಯಲ್ಲಿರುವ ಹರ್ಷಿಕಾಗೆ ಗಣೇಶ್ ಹಾಗೂ ಶಿಲ್ಪಾ ಗಣೇಶ್, ಚಿತ್ರರಂಗದ ಕೆಲವು ಮಿತ್ರರನ್ನು ಆಹ್ವಾನಿಸಿ ಬೇಬಿ ಶವರ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾಲಾಶ್ರೀ ಹಾಗೂ ಮಗಳು ಆರಾಧನಾ, ಶೃತಿ ಹಾಗೂ ಮಗಳು ಗೌರಿ , ಪ್ರಿಯಾಂಕಾ ಉಪೇಂದ್ರ ,ಅನು ಪ್ರಭಾಕರ್, ಅಮೂಲ್ಯ, ಶರಣ್ಯ ಶೆಟ್ಟಿ, ಸಂಗೀತ ರವಿಶಂಕರ್‍ ಮುಂತಾದವರು ಭಾಗವಹಿಸಿದ್ದರು.

ಅಮ್ಮನಾಗುವ ನಿರೀಕ್ಷೆಯಲ್ಲಿರುವ ಹರ್ಷಿಕಾಗೆ ಮುತ್ತುಗಳ ಹಾಗೂ ಉಡುಗೊರೆಗಳ ಸುರಿ ಮಳೆಯೇ ಬಂದಿದೆ. ಬೇಬಿ ಶವರ್‍ನಲ್ಲಿ ಹಿರಿಯರು, ಕಿರಿಯರು ಎಲ್ಲರೂ ಒಟ್ಟಿಗೆ ಕುಣಿದು, ಹಾಡಿ ಖುಷಿ ಪಟ್ಟಿದ್ದು ವಿಶೇಷವಾಗಿತ್ತು. ಶೃತಿ ಅವರ ಮಗಳು ಗೌರಿ, ಹರ್ಷಿಕಾಗಾಗಿ ಹಾಡಿ ಸರ್ ಪ್ರೈಸ್ ನೀಡಿದ್ದಾರೆ.

ಈ ಸಂದರ್ಭಕ್ಕಾಗಿಯೇ ಬೇಬಿ ಥೀಮ್ ಕೇಕ್ ಸಿದ್ಧಪಡಿಸಲಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳನ್ನು ಶಿಲ್ಪಾ ಗಣೇಶ್ ಖುದ್ದಾಗಿ ನಿಂತು ಹರ್ಷಿಕಾಗಾಗಿ ಆಯೋಜಿಸಿದ್ದರು.

ಅಂದಹಾಗೆ, ಅಕ್ಟೋಬರ್‍ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಹರ್ಷಿಕಾ ಮತ್ತು ಭುವನ್.

ಭೂಮಿಕಾ

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

31 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

35 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

40 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

59 mins ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

1 hour ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago