ಮನರಂಜನೆ

ಹರ್ಷಿಕಾಗೆ ಬೇಬಿ ಶವರ್ ಕಾರ್ಯಕ್ರಮ ಆಯೋಜಿಸಿದ್ದ ಗಣೇಶ್‍ ದಂಪತಿ

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಮಗುವಿನ ಆಗಮನದ ಖುಷಿಯಲ್ಲಿರುವ ಹರ್ಷಿಕಾಗೆ ಗಣೇಶ್ ಹಾಗೂ ಶಿಲ್ಪಾ ಗಣೇಶ್, ಚಿತ್ರರಂಗದ ಕೆಲವು ಮಿತ್ರರನ್ನು ಆಹ್ವಾನಿಸಿ ಬೇಬಿ ಶವರ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾಲಾಶ್ರೀ ಹಾಗೂ ಮಗಳು ಆರಾಧನಾ, ಶೃತಿ ಹಾಗೂ ಮಗಳು ಗೌರಿ , ಪ್ರಿಯಾಂಕಾ ಉಪೇಂದ್ರ ,ಅನು ಪ್ರಭಾಕರ್, ಅಮೂಲ್ಯ, ಶರಣ್ಯ ಶೆಟ್ಟಿ, ಸಂಗೀತ ರವಿಶಂಕರ್‍ ಮುಂತಾದವರು ಭಾಗವಹಿಸಿದ್ದರು.

ಅಮ್ಮನಾಗುವ ನಿರೀಕ್ಷೆಯಲ್ಲಿರುವ ಹರ್ಷಿಕಾಗೆ ಮುತ್ತುಗಳ ಹಾಗೂ ಉಡುಗೊರೆಗಳ ಸುರಿ ಮಳೆಯೇ ಬಂದಿದೆ. ಬೇಬಿ ಶವರ್‍ನಲ್ಲಿ ಹಿರಿಯರು, ಕಿರಿಯರು ಎಲ್ಲರೂ ಒಟ್ಟಿಗೆ ಕುಣಿದು, ಹಾಡಿ ಖುಷಿ ಪಟ್ಟಿದ್ದು ವಿಶೇಷವಾಗಿತ್ತು. ಶೃತಿ ಅವರ ಮಗಳು ಗೌರಿ, ಹರ್ಷಿಕಾಗಾಗಿ ಹಾಡಿ ಸರ್ ಪ್ರೈಸ್ ನೀಡಿದ್ದಾರೆ.

ಈ ಸಂದರ್ಭಕ್ಕಾಗಿಯೇ ಬೇಬಿ ಥೀಮ್ ಕೇಕ್ ಸಿದ್ಧಪಡಿಸಲಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳನ್ನು ಶಿಲ್ಪಾ ಗಣೇಶ್ ಖುದ್ದಾಗಿ ನಿಂತು ಹರ್ಷಿಕಾಗಾಗಿ ಆಯೋಜಿಸಿದ್ದರು.

ಅಂದಹಾಗೆ, ಅಕ್ಟೋಬರ್‍ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಹರ್ಷಿಕಾ ಮತ್ತು ಭುವನ್.

ಭೂಮಿಕಾ

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

3 mins ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

11 mins ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

22 mins ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

27 mins ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

11 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

11 hours ago