ಮನರಂಜನೆ

ಹರ್ಷಿಕಾಗೆ ಬೇಬಿ ಶವರ್ ಕಾರ್ಯಕ್ರಮ ಆಯೋಜಿಸಿದ್ದ ಗಣೇಶ್‍ ದಂಪತಿ

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಮಗುವಿನ ಆಗಮನದ ಖುಷಿಯಲ್ಲಿರುವ ಹರ್ಷಿಕಾಗೆ ಗಣೇಶ್ ಹಾಗೂ ಶಿಲ್ಪಾ ಗಣೇಶ್, ಚಿತ್ರರಂಗದ ಕೆಲವು ಮಿತ್ರರನ್ನು ಆಹ್ವಾನಿಸಿ ಬೇಬಿ ಶವರ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾಲಾಶ್ರೀ ಹಾಗೂ ಮಗಳು ಆರಾಧನಾ, ಶೃತಿ ಹಾಗೂ ಮಗಳು ಗೌರಿ , ಪ್ರಿಯಾಂಕಾ ಉಪೇಂದ್ರ ,ಅನು ಪ್ರಭಾಕರ್, ಅಮೂಲ್ಯ, ಶರಣ್ಯ ಶೆಟ್ಟಿ, ಸಂಗೀತ ರವಿಶಂಕರ್‍ ಮುಂತಾದವರು ಭಾಗವಹಿಸಿದ್ದರು.

ಅಮ್ಮನಾಗುವ ನಿರೀಕ್ಷೆಯಲ್ಲಿರುವ ಹರ್ಷಿಕಾಗೆ ಮುತ್ತುಗಳ ಹಾಗೂ ಉಡುಗೊರೆಗಳ ಸುರಿ ಮಳೆಯೇ ಬಂದಿದೆ. ಬೇಬಿ ಶವರ್‍ನಲ್ಲಿ ಹಿರಿಯರು, ಕಿರಿಯರು ಎಲ್ಲರೂ ಒಟ್ಟಿಗೆ ಕುಣಿದು, ಹಾಡಿ ಖುಷಿ ಪಟ್ಟಿದ್ದು ವಿಶೇಷವಾಗಿತ್ತು. ಶೃತಿ ಅವರ ಮಗಳು ಗೌರಿ, ಹರ್ಷಿಕಾಗಾಗಿ ಹಾಡಿ ಸರ್ ಪ್ರೈಸ್ ನೀಡಿದ್ದಾರೆ.

ಈ ಸಂದರ್ಭಕ್ಕಾಗಿಯೇ ಬೇಬಿ ಥೀಮ್ ಕೇಕ್ ಸಿದ್ಧಪಡಿಸಲಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳನ್ನು ಶಿಲ್ಪಾ ಗಣೇಶ್ ಖುದ್ದಾಗಿ ನಿಂತು ಹರ್ಷಿಕಾಗಾಗಿ ಆಯೋಜಿಸಿದ್ದರು.

ಅಂದಹಾಗೆ, ಅಕ್ಟೋಬರ್‍ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಹರ್ಷಿಕಾ ಮತ್ತು ಭುವನ್.

ಭೂಮಿಕಾ

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

1 min ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

2 mins ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

24 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

47 mins ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

1 hour ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

2 hours ago