ಮನರಂಜನೆ

ಹರ್ಷಿಕಾಗೆ ಬೇಬಿ ಶವರ್ ಕಾರ್ಯಕ್ರಮ ಆಯೋಜಿಸಿದ್ದ ಗಣೇಶ್‍ ದಂಪತಿ

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಮಗುವಿನ ಆಗಮನದ ಖುಷಿಯಲ್ಲಿರುವ ಹರ್ಷಿಕಾಗೆ ಗಣೇಶ್ ಹಾಗೂ ಶಿಲ್ಪಾ ಗಣೇಶ್, ಚಿತ್ರರಂಗದ ಕೆಲವು ಮಿತ್ರರನ್ನು ಆಹ್ವಾನಿಸಿ ಬೇಬಿ ಶವರ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾಲಾಶ್ರೀ ಹಾಗೂ ಮಗಳು ಆರಾಧನಾ, ಶೃತಿ ಹಾಗೂ ಮಗಳು ಗೌರಿ , ಪ್ರಿಯಾಂಕಾ ಉಪೇಂದ್ರ ,ಅನು ಪ್ರಭಾಕರ್, ಅಮೂಲ್ಯ, ಶರಣ್ಯ ಶೆಟ್ಟಿ, ಸಂಗೀತ ರವಿಶಂಕರ್‍ ಮುಂತಾದವರು ಭಾಗವಹಿಸಿದ್ದರು.

ಅಮ್ಮನಾಗುವ ನಿರೀಕ್ಷೆಯಲ್ಲಿರುವ ಹರ್ಷಿಕಾಗೆ ಮುತ್ತುಗಳ ಹಾಗೂ ಉಡುಗೊರೆಗಳ ಸುರಿ ಮಳೆಯೇ ಬಂದಿದೆ. ಬೇಬಿ ಶವರ್‍ನಲ್ಲಿ ಹಿರಿಯರು, ಕಿರಿಯರು ಎಲ್ಲರೂ ಒಟ್ಟಿಗೆ ಕುಣಿದು, ಹಾಡಿ ಖುಷಿ ಪಟ್ಟಿದ್ದು ವಿಶೇಷವಾಗಿತ್ತು. ಶೃತಿ ಅವರ ಮಗಳು ಗೌರಿ, ಹರ್ಷಿಕಾಗಾಗಿ ಹಾಡಿ ಸರ್ ಪ್ರೈಸ್ ನೀಡಿದ್ದಾರೆ.

ಈ ಸಂದರ್ಭಕ್ಕಾಗಿಯೇ ಬೇಬಿ ಥೀಮ್ ಕೇಕ್ ಸಿದ್ಧಪಡಿಸಲಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳನ್ನು ಶಿಲ್ಪಾ ಗಣೇಶ್ ಖುದ್ದಾಗಿ ನಿಂತು ಹರ್ಷಿಕಾಗಾಗಿ ಆಯೋಜಿಸಿದ್ದರು.

ಅಂದಹಾಗೆ, ಅಕ್ಟೋಬರ್‍ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಹರ್ಷಿಕಾ ಮತ್ತು ಭುವನ್.

ಭೂಮಿಕಾ

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

6 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago