ಮನರಂಜನೆ

ಹರ್ಷಿಕಾಗೆ ಬೇಬಿ ಶವರ್ ಕಾರ್ಯಕ್ರಮ ಆಯೋಜಿಸಿದ್ದ ಗಣೇಶ್‍ ದಂಪತಿ

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಮಗುವಿನ ಆಗಮನದ ಖುಷಿಯಲ್ಲಿರುವ ಹರ್ಷಿಕಾಗೆ ಗಣೇಶ್ ಹಾಗೂ ಶಿಲ್ಪಾ ಗಣೇಶ್, ಚಿತ್ರರಂಗದ ಕೆಲವು ಮಿತ್ರರನ್ನು ಆಹ್ವಾನಿಸಿ ಬೇಬಿ ಶವರ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾಲಾಶ್ರೀ ಹಾಗೂ ಮಗಳು ಆರಾಧನಾ, ಶೃತಿ ಹಾಗೂ ಮಗಳು ಗೌರಿ , ಪ್ರಿಯಾಂಕಾ ಉಪೇಂದ್ರ ,ಅನು ಪ್ರಭಾಕರ್, ಅಮೂಲ್ಯ, ಶರಣ್ಯ ಶೆಟ್ಟಿ, ಸಂಗೀತ ರವಿಶಂಕರ್‍ ಮುಂತಾದವರು ಭಾಗವಹಿಸಿದ್ದರು.

ಅಮ್ಮನಾಗುವ ನಿರೀಕ್ಷೆಯಲ್ಲಿರುವ ಹರ್ಷಿಕಾಗೆ ಮುತ್ತುಗಳ ಹಾಗೂ ಉಡುಗೊರೆಗಳ ಸುರಿ ಮಳೆಯೇ ಬಂದಿದೆ. ಬೇಬಿ ಶವರ್‍ನಲ್ಲಿ ಹಿರಿಯರು, ಕಿರಿಯರು ಎಲ್ಲರೂ ಒಟ್ಟಿಗೆ ಕುಣಿದು, ಹಾಡಿ ಖುಷಿ ಪಟ್ಟಿದ್ದು ವಿಶೇಷವಾಗಿತ್ತು. ಶೃತಿ ಅವರ ಮಗಳು ಗೌರಿ, ಹರ್ಷಿಕಾಗಾಗಿ ಹಾಡಿ ಸರ್ ಪ್ರೈಸ್ ನೀಡಿದ್ದಾರೆ.

ಈ ಸಂದರ್ಭಕ್ಕಾಗಿಯೇ ಬೇಬಿ ಥೀಮ್ ಕೇಕ್ ಸಿದ್ಧಪಡಿಸಲಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳನ್ನು ಶಿಲ್ಪಾ ಗಣೇಶ್ ಖುದ್ದಾಗಿ ನಿಂತು ಹರ್ಷಿಕಾಗಾಗಿ ಆಯೋಜಿಸಿದ್ದರು.

ಅಂದಹಾಗೆ, ಅಕ್ಟೋಬರ್‍ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಹರ್ಷಿಕಾ ಮತ್ತು ಭುವನ್.

ಭೂಮಿಕಾ

Recent Posts

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

32 mins ago

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

5 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

5 hours ago

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

21 hours ago