ಮನರಂಜನೆ

ಹರ್ಷಿಕಾಗೆ ಬೇಬಿ ಶವರ್ ಕಾರ್ಯಕ್ರಮ ಆಯೋಜಿಸಿದ್ದ ಗಣೇಶ್‍ ದಂಪತಿ

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಮಗುವಿನ ಆಗಮನದ ಖುಷಿಯಲ್ಲಿರುವ ಹರ್ಷಿಕಾಗೆ ಗಣೇಶ್ ಹಾಗೂ ಶಿಲ್ಪಾ ಗಣೇಶ್, ಚಿತ್ರರಂಗದ ಕೆಲವು ಮಿತ್ರರನ್ನು ಆಹ್ವಾನಿಸಿ ಬೇಬಿ ಶವರ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾಲಾಶ್ರೀ ಹಾಗೂ ಮಗಳು ಆರಾಧನಾ, ಶೃತಿ ಹಾಗೂ ಮಗಳು ಗೌರಿ , ಪ್ರಿಯಾಂಕಾ ಉಪೇಂದ್ರ ,ಅನು ಪ್ರಭಾಕರ್, ಅಮೂಲ್ಯ, ಶರಣ್ಯ ಶೆಟ್ಟಿ, ಸಂಗೀತ ರವಿಶಂಕರ್‍ ಮುಂತಾದವರು ಭಾಗವಹಿಸಿದ್ದರು.

ಅಮ್ಮನಾಗುವ ನಿರೀಕ್ಷೆಯಲ್ಲಿರುವ ಹರ್ಷಿಕಾಗೆ ಮುತ್ತುಗಳ ಹಾಗೂ ಉಡುಗೊರೆಗಳ ಸುರಿ ಮಳೆಯೇ ಬಂದಿದೆ. ಬೇಬಿ ಶವರ್‍ನಲ್ಲಿ ಹಿರಿಯರು, ಕಿರಿಯರು ಎಲ್ಲರೂ ಒಟ್ಟಿಗೆ ಕುಣಿದು, ಹಾಡಿ ಖುಷಿ ಪಟ್ಟಿದ್ದು ವಿಶೇಷವಾಗಿತ್ತು. ಶೃತಿ ಅವರ ಮಗಳು ಗೌರಿ, ಹರ್ಷಿಕಾಗಾಗಿ ಹಾಡಿ ಸರ್ ಪ್ರೈಸ್ ನೀಡಿದ್ದಾರೆ.

ಈ ಸಂದರ್ಭಕ್ಕಾಗಿಯೇ ಬೇಬಿ ಥೀಮ್ ಕೇಕ್ ಸಿದ್ಧಪಡಿಸಲಾಗಿತ್ತು. ಈ ಎಲ್ಲಾ ಕಾರ್ಯಕ್ರಮಗಳನ್ನು ಶಿಲ್ಪಾ ಗಣೇಶ್ ಖುದ್ದಾಗಿ ನಿಂತು ಹರ್ಷಿಕಾಗಾಗಿ ಆಯೋಜಿಸಿದ್ದರು.

ಅಂದಹಾಗೆ, ಅಕ್ಟೋಬರ್‍ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಹರ್ಷಿಕಾ ಮತ್ತು ಭುವನ್.

ಭೂಮಿಕಾ

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

7 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

10 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

10 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

10 hours ago