ಮನರಂಜನೆ

ಪನ್ನಗಾಭರಣ ನಿರ್ದೇಶನದ ಚಿತ್ರದಲ್ಲಿ ಗಣೇಶ್‍?

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳಿದೆ. ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರವು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕೃಷ್ಣಂ ಪ್ರಣಯ ಸಖಿ’ ನಂತರ ಗಣೇಶ್‍ ಯಾವ ಚಿತ್ರದಲ್ಲಿ ನಟಿಸುತ್ತಾರೆ? ಇಂಥದ್ದೊಂದು ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇದೆ.

ಹೀಗಿರುವಾಗಲೇ, ಪನ್ನಗಾಭರಣ ನಿರ್ದೇಶನದ ಚಿತ್ರವೊಂದರಲ್ಲಿ ಗಣೇಶ್ ಅಭಿನಯಿಸುತ್ತಿರುವ ಸುದ್ದಿ ಬಂದಿದೆ. ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಮಗನಾದ ಪನ್ನಗ, ಕೆಲವು ವರ್ಷಗಳ ಹಿಂದೆ ‘ಹ್ಯಾಪಿ ನ್ಯೂ ಇಯರ್‍’ ಎಂಬ ಚಿತ್ರ ನಿರ್ದೇಶಿಸಿದ್ದರು. ಬಿ.ಸಿ. ಪಾಟೀಲ್‍ ನಿರ್ಮಾಣದ ಈ ಚಿತ್ರ ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ನಂತರ ಅವರು ಪಿ.ಆರ್‍.ಕೆ. ಪ್ರೊಡಕ್ಷನ್ಸ್ಗಾಗಿ ‘ಫ್ರೆಂಚ್‍ ಬಿರಿಯಾನಿ’ ಚಿತ್ರವನ್ನು ನಿರ್ದೇಶಿಸಿದರು. ನೇರವಾಗಿ ಓಟಿಟಿಯಲ್ಲಿ ಬಿಡುಗಡೆಯಾದ ಈ ಚಿತ್ರ ಮೆಚ್ಚುಗೆ ಪಡೆದಿತ್ತು.

ಈಗ ಅದಾಗಿ ನಾಲ್ಕು ವರ್ಷಗಳ ನಂತರ ಗಣೇಶ್‍ ಅಭಿನಯದಲ್ಲಿ ಪನ್ನಗ ಒಂದು ಚಿತ್ರ ನಿರ್ದೇಶಿಸುತ್ತಾರೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ. ಇದೊಂದು ಕಾಮಿಡಿ ಚಿತ್ರವಾಗಿದ್ದು, ಗಣೇಶ್ ಇಮೇಜ್‍ಗೆ ಹೇಳಿ ಮಾಡಿಸಿದೆಯಂತೆ. ಈಗಾಗಲೇ ಗಣೇಶ್‍ ಮತ್ತು ಪನ್ನಗ ನಡುವೆ ಒಂದು ಸುತ್ತಿನ ಮಾತುಕತೆಯೂ ಆಗಿದೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ, ಈ ಚಿತ್ರವನ್ನು ಯಾರು ನಿರ್ಮಿಸುತ್ತಾರೆ? ಯಾವಾಗ ಶುರುವಾಗುತ್ತದೆ? ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬ ಮಾಹಿತಿ ಸದ್ಯಕ್ಕೆ ಸಿಕ್ಕಿಲ್ಲ. ಸದ್ಯಕ್ಕೆ ಕಥೆ ಮಾತ್ರ ಓಕೆ ಆಗಿದ್ದು, ಮಿಕ್ಕ ವಿಷಯಗಳು ಮುಂದಿನ ದಿನಗಳಲ್ಲಿ ಹೊರಬೀಳಬೇಕಿದೆ.

ಇದಲ್ಲದೆ, ಗಣೇಶ್ ಹುಟ್ಟುಹಬ್ಬದ ಸಂದರ್ಭದಲ್ಲಿ ಇನ್ನೊಂದು ಚಿತ್ರತಂಡ ಗಣೇಶ್‍ಗೆ ಶುಭಾಷಯಗಳನ್ನು ಕೋರಿದೆ. ಹಾಗೆ ನೋಡಿದರೆ ಇದು ಹೊಸ ಚಿತ್ರವೇನಲ್ಲ. ಕಳೆದ ವರ್ಷವೇ ವಿಖ್ಯಾತ್‍ ಪ್ರೊಡಕ್ಷನ್ಸ್ ಸಂಸ್ಥೆಯಡಿ ವಿಖ್ಯಾತ್‍ ಒಂದು ಹೊಸ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ ಮತ್ತು ಅದರಲ್ಲಿ ಗಣೇಶ್‍ ಮತ್ತು ರಮೇಶ್‍ ಅರವಿಂದ್‍ ಜೊತೆಯಾಗಿ ನಟಿಸುತ್ತಿದ್ದಾರೆ ಎಂಬ ವಿಷಯ ಹೊರಬಿದ್ದಿತ್ತು. ಅಷ್ಟೇ ಅಲ್ಲ, ಇಬ್ಬರೂ ನಟರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಶುಭಾಶಯಗಳನ್ನು ಕೋರಿತ್ತು.

ಈಗ ಆ ಚಿತ್ರವು ಸೆಪ್ಟೆಂಬರ್‍ನಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಮುಂಚೆ ಈ ಚಿತ್ರವನ್ನು ವಿಖ್ಯಾತ್‍ ನಿರ್ಮಿಸಿ-ನಿರ್ದೇಶಿಸುತ್ತಾರೆ ಎಂಬ ಸುದ್ದಿ ಇತ್ತು. ಆದರೆ, ಈಗ ನಿರ್ದೇಶನ ಮಾತ್ರ ವಿಖ್ಯಾತ್ ಮಾಡುತ್ತಿದ್ದು, ನಿರ್ಮಾಣದ ಜವಾಬ್ದಾರಿಯನ್ನು ಧನಂಜಯ್‍ ಅಭಿನಯದ ‘ಅಣ್ಣ ಫ್ರಮ್‍ ಮೆಕ್ಸಿಕೋ’ ಚಿತ್ರ ನಿರ್ಮಿಸುತ್ತಿರುವ ಸತ್ಯ ರಾಯಲ ನಿರ್ಮಿಸುತ್ತಿದ್ದಾರೆ ಎಂದು ಸುದ್ದಿಯಾಗಿದೆ.

ಅಲ್ಲಿಗೆ ‘ಕೃಷ್ಣಂ ಪ್ರಣಯ ಸಖಿ’ ನಂತರ ಗಣೇಶ್‍ ಅಭಿನಯದ ಎರಡು ಚಿತ್ರಗಳ ಕುರಿತು ಸುದ್ದಿ ಕೇಳಿ ಬರುತ್ತಿವೆ. ಈ ಪೈಕಿ ಯಾವುದು ಮೊದಲು ಸೆಟ್ಟೇರುತ್ತದೋ ನೋಡಬೇಕು.

ಭೂಮಿಕಾ

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

5 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

8 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

9 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

10 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

10 hours ago