ಮನರಂಜನೆ

ಅರಸು ಜೊತೆಯಾದ ಗಣೇಶ್‍: ಏಪ್ರಿಲ್‍ನಿಂದ ಹೊಸ ಚಿತ್ರ ಪ್ರಾರಂಭ

2014ರಲ್ಲಿ ಬಿಡುಗಡೆಯಾದ ‘ಲವ್‍ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ.

ಸದ್ಯ ‘ಯುರ್ಸ್ ಸಿನ್ಸಿಯರ್ಲಿ ರಾಮ್‍’ ಮತ್ತು ‘ಪಿನಾಕ’ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಗಣೇಶ್‍, ಏಪ್ರಿಲ್ 6 ರಂದು ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ‌. ಏಪ್ರಿಲ್.7 ರಿಂದ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಚಿತ್ರದ ಹೆಸರೇನು? ಈ ಹೊಸ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ? ಇದರ ವಿಶೇಷತೆಗಳೇನು? ಎಂಬ ವಿಷಯಗಳನ್ನು ಚಿತ್ರತಂಡ ಇನ್ನೂ ಹಂಚಿಕೊಂಡಿಲ್ಲ. ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ.

ವಿಶೇಷವೆಂದರೆ, ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಯಶಸ್ವಿಯಾದ ತೆಲುಗಿನ ‘ಹನುಮ್ಯಾನ್’ ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

SNT ಎಂಟರ್ಪ್ರೈಸಸ್ ಲಾಂಛನದಲ್ಲಿ ರವಿ ನಿರ್ಮಿಸುತ್ತಿರುವ ಈ ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ. ಸುಜ್ಞಾನ್ ಛಾಯಾಗ್ರಹಣವಿದೆ.

 

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

3 hours ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

3 hours ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

6 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

6 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

6 hours ago